22.6 C
ಪುತ್ತೂರು, ಬೆಳ್ತಂಗಡಿ
July 23, 2026
ರಾಜಕೀಯವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಬೆಳ್ತಂಗಡಿಯಲ್ಲಿ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು, ನಾಯಕರು, ಕಾರ್ಯಕರ್ತರು ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗಬೇಕು. ಬೂತ್ ಮಟ್ಟದಲ್ಲಿ ಜನ ಸಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಪರ ಧ್ವನಿಯಾಗಬೇಕು. ಪಕ್ಷ ಸೇರ್ಪಡೆ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಕ್ಷೇತ್ರ ಸಮಿತಿಯ ವತಿಯಿಂದ ಕೈಗೊಂಡ ಜನಪರ ಹೋರಾಟಗಳು, ಸಂಘಟನಾ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಪಕ್ಷದ ಬಲವರ್ಧನೆ, ಮುಂಬರುವ ಕಾರ್ಯಕ್ರಮಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಳ್ಳಬೇಕಾದ ಹೋರಾಟಗಳ ಕುರಿತು ಮುಂದಿನ ಕಾರ್ಯತಂತ್ರಗಳನ್ನು ರೂಪಿಸಲಾಯಿತು.

ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಅತಿಥಿ ಭಾಷಣ ಮಾಡಿದರು. ಕ್ಷೇತ್ರದ ವಿವಿಧ ಬ್ಲಾಕ್‌ಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಮಂಡಿಸಿದರು.ವೇದಿಕೆಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲೆಕೆಮಜಲ್, ನವಾಝ್ ಕಟ್ಟೆ, ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿಹ್ ಮದ್ದಡ್ಕ ಸೇರಿದಂತೆ ಕ್ಷೇತ್ರ, ಬ್ಲಾಕ್ ನಾಯಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!