24.4 C
ಪುತ್ತೂರು, ಬೆಳ್ತಂಗಡಿ
June 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆಯನ್ನು ಹಣ್ಣಿನ ಗಿಡಗಳನ್ನು ನೇಡುವುದರೊಂದಿಗೆ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಕಾಂತ ನಾಯಕ, ಉಪಾಧ್ಯಕ್ಷೆ ರೂಪ, ಸದಸ್ಯರಾದ ಆನಂದ ಪೂಜಾರಿ, ಶೇಖರ ಆಚಾರ್ಯ ಉಪಸ್ಥಿತರಿದ್ದರು. ತದನಂತರ ಪುಸ್ತಕ ಪೂಜೆಯನ್ನು ಮಾಡುವುದರೊಂದಿಗೆ ಶಾರದಾ ಮಾತೆಯನ್ನು ಮಕ್ಕಳು ಭಜನೆಯ ಮೂಲಕ ಸ್ತುತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ದೀಪ ಪ್ರಜ್ವಲನೆ ಗೈದರು.


ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಸರ್ವ ಸದಸ್ಯರು ಭಜನೆಯಲ್ಲಿ ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಸಹಶಿಕ್ಷಕಿ ಶಾಲಿನಿ ಧನ್ಯವಾದವನ್ನಿತ್ತರು. ಸಹಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಗಾರಕ್ಕೆ ಚಾಲನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!