23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಭಾ ಕಾರ್ಯಕ್ರಮ ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಇದರ ಉದ್ಘಾಟನಾ ಸಮಾರಂಭ ನಡೆದು ಸಂಜೆ ಸಭಾ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ ಜೋಡು ಜೀಟಿಗೆ ನಾಟಕ ಪ್ರದರ್ಶನ ನಡೆಯಿತು.ಮೆಸ್ಕಾಂ ಮಂಗಳೂರು ಇದರ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಪ್ರಾ.ಕೃ.ಸ,ಸೇ. ಸಂಘ ಉಜಿರೆ ಇದರ ಅಧ್ಯಕ್ಷರಾದ ಕೇರಿಮಾರ್ ಬಾಲಕೃಷ್ಣ ಗೌಡ ಅಧ್ಯಕ್ಷತೆಯನ್ನು ವಹಿಸಿದರು. ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಇದರ ಅಧ್ಯಕ್ಷರಾದ ಶ್ರೀಧರ ಜಿ. ಭಿಡೆ ಹಾಗೂ ಉಜಿರೆ ಸಂತ ಅಂತೋನಿ ಚರ್ಚ್ನ ಧರ್ಮಗುರುಗಳಾದ ರೆ|ಫಾ| ಅಬೆಲ್ ಲೋಬೋ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ರೈ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಖ್ಯಾತ ನೃತ್ಯ ತಂಡ ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ಇವರಿಂದ ಗಾನ ನೃತ್ಯ ವೈಭವ ಹಾಗೂ ನಾಟಕ ರಂಗದಲ್ಲಿ ಸದ್ದನ್ನು ಮಾಡಿದ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿಶಕ್ತಿ ಕಲಾಬಳಗ, ಉರ್ವ ಚಿಲಿಂಬಿ, ಮಂಗಳೂರು ಇವರಿಂದ “ಜೋಡು ಜೀಟಿಗೆ” ತುಳು ಜನಪದ ನಾಟಕ ಜರಗಿತು. ನೂರಾರು ಪ್ರೇಕ್ಷಕರು ನಾಟಕವನ್ನು ಸಂಪೂರ್ಣವಾಗಿ ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

Related posts

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya
error: Content is protected !!