July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಇದರ ಉದ್ಘಾಟನಾ ಸಮಾರಂಭ ನಡೆದು ಸಂಜೆ ಸಭಾ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ ಜೋಡು ಜೀಟಿಗೆ ನಾಟಕ ಪ್ರದರ್ಶನ ನಡೆಯಿತು.ಮೆಸ್ಕಾಂ ಮಂಗಳೂರು ಇದರ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದರು.

ಪ್ರಾ.ಕೃ.ಸ,ಸೇ. ಸಂಘ ಉಜಿರೆ ಇದರ ಅಧ್ಯಕ್ಷರಾದ ಕೇರಿಮಾರ್ ಬಾಲಕೃಷ್ಣ ಗೌಡ ಅಧ್ಯಕ್ಷತೆಯನ್ನು ವಹಿಸಿದರು. ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಇದರ ಅಧ್ಯಕ್ಷರಾದ ಶ್ರೀಧರ ಜಿ. ಭಿಡೆ ಹಾಗೂ ಉಜಿರೆ ಸಂತ ಅಂತೋನಿ ಚರ್ಚ್ನ ಧರ್ಮಗುರುಗಳಾದ ರೆ|ಫಾ| ಅಬೆಲ್ ಲೋಬೋ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ರೈ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಖ್ಯಾತ ನೃತ್ಯ ತಂಡ ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ಇವರಿಂದ ಗಾನ ನೃತ್ಯ ವೈಭವ ಹಾಗೂ ನಾಟಕ ರಂಗದಲ್ಲಿ ಸದ್ದನ್ನು ಮಾಡಿದ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿಶಕ್ತಿ ಕಲಾಬಳಗ, ಉರ್ವ ಚಿಲಿಂಬಿ, ಮಂಗಳೂರು ಇವರಿಂದ “ಜೋಡು ಜೀಟಿಗೆ” ತುಳು ಜನಪದ ನಾಟಕ ಜರಗಿತು. ನೂರಾರು ಪ್ರೇಕ್ಷಕರು ನಾಟಕವನ್ನು ಸಂಪೂರ್ಣವಾಗಿ ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

Related posts

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya
error: Content is protected !!