ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆಯನ್ನು ಹಣ್ಣಿನ ಗಿಡಗಳನ್ನು ನೇಡುವುದರೊಂದಿಗೆ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಕಾಂತ ನಾಯಕ, ಉಪಾಧ್ಯಕ್ಷೆ ರೂಪ, ಸದಸ್ಯರಾದ ಆನಂದ ಪೂಜಾರಿ, ಶೇಖರ ಆಚಾರ್ಯ ಉಪಸ್ಥಿತರಿದ್ದರು. ತದನಂತರ ಪುಸ್ತಕ ಪೂಜೆಯನ್ನು ಮಾಡುವುದರೊಂದಿಗೆ ಶಾರದಾ ಮಾತೆಯನ್ನು ಮಕ್ಕಳು ಭಜನೆಯ ಮೂಲಕ ಸ್ತುತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ದೀಪ ಪ್ರಜ್ವಲನೆ ಗೈದರು.

ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಸರ್ವ ಸದಸ್ಯರು ಭಜನೆಯಲ್ಲಿ ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಸಹಶಿಕ್ಷಕಿ ಶಾಲಿನಿ ಧನ್ಯವಾದವನ್ನಿತ್ತರು. ಸಹಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿದರು.












