24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌.

ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳುವದರೊಂದಿಗೆ ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು‌.

ಶಿಕ್ಷಕ ಸುಮನ್ ಯು.ಎಸ್ ಮಾಸ್ತಿಯವರ ಕೃತಿಗಳನ್ನು ಪರಿಚಯಿಸಿದರು. ಮಾಸ್ತಿಯವರ ಜ್ಞಾನಪೀಠ ಪುರಸ್ಕೃತ ಚಿಕವೀರ ರಾಜೇಂದ್ರ ಕೃತಿಯನ್ನು ಪ್ರದರ್ಶಿಸಲಾಯಿತು. ಮಾಸ್ತಿ ವೆಂಕಟೇಶ್ ಅಯ್ಯಂಗಾರರ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿದ್ಯಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!