July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌.

ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳುವದರೊಂದಿಗೆ ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು‌.

ಶಿಕ್ಷಕ ಸುಮನ್ ಯು.ಎಸ್ ಮಾಸ್ತಿಯವರ ಕೃತಿಗಳನ್ನು ಪರಿಚಯಿಸಿದರು. ಮಾಸ್ತಿಯವರ ಜ್ಞಾನಪೀಠ ಪುರಸ್ಕೃತ ಚಿಕವೀರ ರಾಜೇಂದ್ರ ಕೃತಿಯನ್ನು ಪ್ರದರ್ಶಿಸಲಾಯಿತು. ಮಾಸ್ತಿ ವೆಂಕಟೇಶ್ ಅಯ್ಯಂಗಾರರ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿದ್ಯಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya
error: Content is protected !!