24.1 C
ಪುತ್ತೂರು, ಬೆಳ್ತಂಗಡಿ
September 6, 2026
ಕೃಷಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಸತಿ ವಿದ್ಯಾರ್ಥಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಬೀಜದ ಗುಂಡಿಗಳನ್ನು ತಯಾರಿಸಿ ಅವುಗಳನ್ನು ಸೂಕ್ತ ಸ್ಥಳಗಳಲ್ಲಿ ಇರಿಸುವುದರಿಂದ ಹಿಡಿದು, ಸಸಿಗಳನ್ನು ನೆಡುವವರೆಗೆ ಪ್ರತಿಯೊಂದು ಚಟುವಟಿಕೆಯನ್ನು ಉದ್ದೇಶಪೂರ್ವಕವಾಗಿ ಮತ್ತು ಪರಿಸರದ ಹಿತದೃಷ್ಟಿಯಿಂದ ನಡೆಸಲಾಯಿತು.

ಎಕ್ಸೆಲ್ ಟೆಕ್ನೋ ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಅವರು ಮಾತನಾಡಿ ಪರಿಸರ ಒಂದು ಸುಂದರಮಯ ತಾಣ. ಪರಿಸರದಿಂದ ನಾವು ಎಲ್ಲವನ್ನು ಪಡೆಯುತ್ತೇವೆ. ಆದರೆ ಪರಿಸರಕ್ಕೆ ನಾವೇನು ಕೊಡುತ್ತಿದ್ದೇವೆಂದು ತಿಳಿಯಬೇಕು‌. ನಮ್ಮ ಸುತ್ತಮುತ್ತ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದರು‌.

ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya
error: Content is protected !!