24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವೇಣೂರು : ಪಿ.ಎಂ. ಶ್ರೀ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ, ಬಜಿರೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಯಿಂದ ನೀಡಲಾದ ವಿವಿಧ ಜಾತಿಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡುವುದರ ಮೂಲಕ ಚಾಲನೆ ನೀಡಲಾಯಿತು. ಗಿಡ ನೆಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅತಿಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಮನಗಂಡು, ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ಭರತ್, ವಲಯ ಅರಣ್ಯ ಅಧಿಕಾರಿ ಅಶ್ವಿತ್ ಕೆ., ಗಸ್ತು ಅರಣ್ಯಪಾಲಕ ದಿವಾಕರ್, ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಲೋಕೇಶ್ ಕೋರ್ಲೋಡಿ, ತಾಯಂದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಉಪಾಧ್ಯಕ್ಷೆ ಶ್ರೀಮತಿ ಸವಿತಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಶೆಟ್ಟಿ, ಎಸ್.ಡಿ.ಎಂ.ಸಿ. ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಎಸ್.ಬಿ.ಸಿ. ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶ್ರೀ ಭರತ್ ಅವರು ಮಾತನಾಡಿ, “ಒಬ್ಬ ವ್ಯಕ್ತಿ ಒಂದು ಗಿಡ ನೆಟ್ಟು ಅದನ್ನು ಪೋಷಿಸಿದರೆ, ಆತ ಭವಿಷ್ಯದ ಪೀಳಿಗೆಗೆ ಅಮೂಲ್ಯವಾದ ಕೊಡುಗೆಯನ್ನು ನೀಡಿದಂತಾಗುತ್ತದೆ” ಎಂದು ಹೇಳಿದರು. ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಅರಣ್ಯ ನಾಶ, ಪ್ಲಾಸ್ಟಿಕ್ ಬಳಕೆ ಮತ್ತು ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ “ಗಿಡ ನೆಡಿ – ಜೀವ ಉಳಿಸಿ”, “ಪರಿಸರ ಉಳಿಸಿ – ಭವಿಷ್ಯ ಬೆಳೆಸಿ”, “ಹಸಿರು ನಮ್ಮ ಉಸಿರು” ಮುಂತಾದ ಘೋಷಣೆಗಳನ್ನು ಕೂಗಿಸಲಾಯಿತು. ನಂತರ ಎಲ್ಲಾ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.ಕೆಲವು ವಿದ್ಯಾರ್ಥಿಗಳು ತಮ್ಮ ಭಾಷಣಗಳ ಮೂಲಕ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಅವರು ಪರಿಸರ ಸಂರಕ್ಷಣೆ, ನೀರಿನ ಉಳಿತಾಯ, ಪ್ಲಾಸ್ಟಿಕ್ ತ್ಯಜಿಸುವಿಕೆ ಹಾಗೂ ಗಿಡಮರಗಳ ಮಹತ್ವದ ಕುರಿತು ಮನಮುಟ್ಟುವ ವಿಚಾರಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಶೆಟ್ಟಿ ಅವರು ಮಾತನಾಡಿ, “ಇಂದು ನಾವು ನೆಡುವ ಪ್ರತಿಯೊಂದು ಗಿಡವೂ ನಾಳಿನ ಆರೋಗ್ಯಕರ ಸಮಾಜದ ಅಡಿಪಾಯವಾಗಿದೆ. ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೇ ನಮ್ಮ ದೈನಂದಿನ ಜೀವನದ ಭಾಗವಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪರಿಸರದ ಬಗ್ಗೆ ಕಾಳಜಿ ವಹಿಸುವ ಮೂಲಕ ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಸಮಾಜವನ್ನು ನಿರ್ಮಿಸಬಹುದೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ರಾಜಶ್ರೀ ಆಚಾರ್ಯ (8ನೇ ತರಗತಿ) ಸ್ವಾಗತಿಸಿದರು. ಶ್ರೀದೇವಿ (8ನೇ ತರಗತಿ) ವಂದಿಸಿದರು. ಸ್ಪಂದನಾ (8ನೇ ತರಗತಿ) ಹಾಗೂ ವರ್ಧಿನಿ (8ನೇ ತರಗತಿ) ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.

Related posts

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!