24.4 C
ಪುತ್ತೂರು, ಬೆಳ್ತಂಗಡಿ
June 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆಯನ್ನು ಹಣ್ಣಿನ ಗಿಡಗಳನ್ನು ನೇಡುವುದರೊಂದಿಗೆ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಕಾಂತ ನಾಯಕ, ಉಪಾಧ್ಯಕ್ಷೆ ರೂಪ, ಸದಸ್ಯರಾದ ಆನಂದ ಪೂಜಾರಿ, ಶೇಖರ ಆಚಾರ್ಯ ಉಪಸ್ಥಿತರಿದ್ದರು. ತದನಂತರ ಪುಸ್ತಕ ಪೂಜೆಯನ್ನು ಮಾಡುವುದರೊಂದಿಗೆ ಶಾರದಾ ಮಾತೆಯನ್ನು ಮಕ್ಕಳು ಭಜನೆಯ ಮೂಲಕ ಸ್ತುತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ದೀಪ ಪ್ರಜ್ವಲನೆ ಗೈದರು.


ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಸರ್ವ ಸದಸ್ಯರು ಭಜನೆಯಲ್ಲಿ ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಸಹಶಿಕ್ಷಕಿ ಶಾಲಿನಿ ಧನ್ಯವಾದವನ್ನಿತ್ತರು. ಸಹಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!