24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

ಬೆಳ್ತಂಗಡಿ: ದಿನ ನಿತ್ಯ ರಾಜ್ಯ ಹೊರ ರಾಜ್ಯಗಳಿಂದ ಸಾವಿರಾರು ಭಕ್ತಾದಿಗಳು ಕುಕ್ಕೆ ಕ್ಷೇತ್ರಕ್ಕೆ ಬಂದು ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಾರೆ. ಆದರೆ ಬರುವಾಗ ಅಥವಾ ಹೋಗುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ, ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಮಾರ್ಗದ ಬದಿಯ ಚರಂಡಿಗೆ ಎಸೆದು ಹೋಗುವುದು ಸಾಮಾನ್ಯವಾಗಿದೆ. ಎಷ್ಟೇ ಬಾರಿ ಜಾಗೃತಿ ಮೂಡಿಸಿದರು ಕೂಡ ಇದು ನಿರಂತರವಾದ ಕೆಲವು ಭಕ್ತಾದಿಗಳು ಹಾಗೂ ಪ್ರಯಾಣಿಕರ ಅಭ್ಯಾಸವಾಗಿಬಿಟ್ಟಿದೆ.

ಕಳೆದ 11 ವರ್ಷಗಳಿಂದ ನಿರಂತರವಾಗಿ ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬರುತ್ತಿರುವ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಜೂ. 7ರಂದು ಕೂಡ 533ನೇ ವಾರದಲ್ಲಿ ಕುಮಾರಧಾರ ಸೇತುವೆಯಿಂದ ಕುಲ್ಕುಂದದವರೆಗೆ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಇದ್ದಂತಹ ಪ್ಲಾಸ್ಟಿಕ್ ಚೀಲ ಪ್ಲಾಸ್ಟಿಕ್ ತಟ್ಟೆ ಪ್ಲಾಸ್ಟಿಕ್ ಬಾಟಲಿ ಇತ್ಯಾದಿಗಳನ್ನ ಸ್ವಚ್ಛಗೊಳಿಸಿರುತ್ತಾರೆ. ಸ್ವಚ್ಛತಾ ಕಾರ್ಯವನ್ನು ಮಾಡುತ್ತಿರುವ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬಂದ ದೇವರ ಭಕ್ತ ಚಲನಚಿತ್ರ ನಟ ನಿರ್ಮಾಪಕ ಹಾಗೂ ಸಮಾಜಸೇವಕ ರಾಜಶೇಖರ ಕೋಟ್ಯಾನ್ ಅವರು ಸ್ವಚ್ಛತ ಮಾಡುತ್ತಿರುವ ಸ್ಥಳಕ್ಕೆ ಬಂದರು.

ಬಳಿಕ ಡಾ.ರಾಜಶೇಖರ್ ಕೋಟ್ಯಾನ್ ಸ್ವಚ್ಛತಾ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡುತ್ತಾ ” ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ದೇಶದ ಹಾಗೂ ರಾಜ್ಯದ ಪ್ರತಿಷ್ಠಿತ ನಾಗಾರಾಧನೆಯ ಕ್ಷೇತ್ರವಾಗಿದ್ದು ಇಲ್ಲಿ ಸ್ವಚ್ಛತೆಗೆ ಬಹಳ ಪ್ರಾಮುಖ್ಯ ನೀಡಬೇಕಾಗಿದೆ. ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯವಿದೆ, ಎಂಬಂತೆ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಇಲ್ಲಿ ಪ್ರತಿ ರವಿವಾರ ಸುಮಾರು 50 ರಿಂದ 60 ಸ್ವಯಂಸೇವಕ ಸಿಬ್ಬಂದಿಗಳೊಂದಿಗೆ ನಿರಂತರವಾಗಿ ಕ್ಷೇತ್ರದಾದ್ಯಂತ ಸ್ವಚ್ಛತಾ ಕಾರ್ಯವನ್ನು ಮಾಡುತ್ತಿರುವ ಡಾ. ರವಿ ಕಕ್ಕೆಪದವು ಸಮಾಜ ಸೇವ ಟ್ರಸ್ಟ್ ನ ಎಲ್ಲಾ ಸದಸ್ಯರುಗಳು ಹಾಗೂ ಅದರ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ಇವರ ಕಾರ್ಯವನ್ನು ಮೆಚ್ಚಿಕೊಂಡು ಇದರಿಂದ ಆದಷ್ಟು ಜಾಗೃತಿ ಭಕ್ತಾದಿಗಳಲ್ಲಿ ಹಾಗೂ ಪ್ರಯಾಣಿಕರಲಿ ಮೂಡಲಿ” ಎಂದರು. ಅವರೊಂದಿಗೆ ಸೋಮೇಶ್ವರ ದೇವಳದ ಆಡಳಿತ ಸಮಿತಿ ಸದಸ್ಯ ಹಾಗೂ ಪುರಸಭಾ ಸದಸ್ಯ ದೀಪಕ್ ಪಿಲ್ಲಾರ್, ಗೆಜ್ಜೆಗೆರೆ ಕ್ಷೇತ್ರದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದೀಪಕ್ ಕೊಟ್ಯಾನ್, ಲೋಕೋಪಯೋಗಿ ಇಲಾಖೆ ಉದ್ಯಮಿ ವೈಶಾಖ ರಾವ್ ರವರು ಸ್ವಚ್ಛತಾ ಕಾರ್ಯಕ್ರಮವನ್ನು ಶ್ಲಾಘಿಸಿ ಎಲ್ಲರೂ ಇಂತಹ ಪುಣ್ಯ ಕಾರ್ಯದಲ್ಲಿ ತೊಡಗಿಸುವುದರೊಂದಿಗೆ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದರು.

ಡಾ. ರವಿ ಕಕ್ಕೆ ಪದವು ಅವರು ಸ್ವಚ್ಛತಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕ ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡು ತೋಟ, ರೋಟರಿ ಕ್ಲಬ್ ಪೂರ್ವ ಅಧ್ಯಕ್ಷ ಗೋಪಾಲ್ ಎಣ್ಣೆ ಮಜಲ್, ಕುಲಕುಂದ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸ್ಕಂದ, ವೈಟ್ ಲಿಫ್ಟರ್ ಗಣೇಶ್ ಮುಂತಾದವರು ಹಾಜರಿದ್ದು ಸ್ವಚ್ಛತೆಯ ಬಗ್ಗೆ ತಮ್ಮ ತಮ್ಮ ಅನುಭವಗಳನ್ನು ತಿಳಿಸಿದರು.

Related posts

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya
error: Content is protected !!