ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ 4ರಂದು ಆಯೋಜಿಸಲಾಯಿತು.

ವಿಕಾಸ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅಲೋಶಿಯಸ್ ಡಿಸೋಜ ಮಾತನಾಡಿ ಆರೋಗ್ಯವೇ ಭಾಗ್ಯ.ಈ ರೀತಿಯ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆಯಿಂದ ಹೆಚ್ಚಿನ ಜನರಿಗೆ ಒಳ್ಳೆಯ ಮಾಹಿತಿ ಸಿಗುತ್ತದೆ ಎಂದರು.

ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ಇಂದಿನ ಒತ್ತಡದ ಜೀವನ ಪದ್ದತಿಯಲ್ಲಿ ಆರೋಗ್ಯವನ್ನು ಕಾಪಾಡುವುದೇ ಒಂದು ಸವಾಲಾಗಿದೆ. ಖಾಸಾಗಿ ಬಸ್ಸ್ ನೌಕರರಿಗೆ ಉಚಿತ ಆರೋಗ್ಯ ಶಿಬಿರ ಏರ್ಪಡಿಸುವುದರಿಂದ ತುಂಬಾ ಜನರಿಗೆ ಪ್ರಯೋಜನವಾಗಿದೆ ಎಂದರು.

ಖಾಸಗಿ ಬಸ್ ನೌಕರರ ಸಂಘದ ಗೌರವ ಸಲಹೆಗಾರರಾದ ಚಿದಾನಂದ ಸಾಲಿಯಾನ್ ಮಾತನಾಡಿ ನಮ್ಮಂತಹ ಬಸ್ ನೌಕರರನ್ನು ಗುರುತಿಸಿ ಬಸ್ ನೌಕರರ ಆರೋಗ್ಯದ ಕ್ಷೇಮಕ್ಕಾಗಿ ಐದು ದಿನಗಳ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಒಳ್ಳೆಯ ಬೆಳವಣಿಗೆ ಎಂದರು.

ವೇದಿಕೆಯಲ್ಲಿ ಡಾ | ವನೋರ ಲೋಬೊ,ಡಾ | ನಿಶಾ ಸಿಕ್ವೇರಾ, ಕಟ್ಟೆಮಾರ್ ಕ್ಷೇತ್ರದ ಧರ್ಮದರ್ಶಿ ಮನೋಜ್ ಕಟ್ಟೆಮಾರ್,ಖಾಸಗಿ ಬಸ್ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದಿ ಕೆಂಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಸಂಸ್ಥಾಪಕರಾದ ದೀಪಕ್.ಜಿ ಬೆಳ್ತಂಗಡಿ, ಸರ್ವ ಪದಾಧಿಕಾರಿಗಳಾದ
ಪದ್ಮಪ್ರಸಾದ್, ನಾರಾಯಣ್, ಇಲಿಯಾಸ್, ಪ್ರವೀಣ್ ಪಿಂಟೋ ,ದಿವಾಕರ್, ಚಿದಾನಂದ್ ಸಾಲಿಯಾನ್, ಜಯ ಉಪ್ಪಿನಂಗಡಿ, ಚಾಬಕ್ಕ ಸೇರಿದಂತೆ ಖಾಸಗಿ ಬಸ್ ನೌಕರರ ಸಂಘದ ಹಲವು ಪದಾಧಿಕಾರಿಗಳು, ಮೆಡೆಕ್ಸ್ ಪಾಲಿಕ್ಲಿನಿಕ್ ನ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಚಾಲಕರಾದ ಚಾಬಕ್ಕ ಇವರನ್ನು ಗೌರವಿಸಲಾಯಿತು.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya
error: Content is protected !!