26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ: ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ

ಬೆಳ್ತಂಗಡಿ : ಕಾರ್ಮಿಕರ ಸಮಸ್ಯೆಗಳ ಪರಿಣಾಮಕಾರಿ ಪರಿಹಾರ, ಸಂಘಟನೆಯ ವಿಸ್ತರಣೆ, ಯೂನಿಯನ್‌ಗಳ ಸಬಲೀಕರಣ ಹಾಗೂ ಹೊಸ ಕ್ಷೇತ್ರಗಳ ಕಾರ್ಮಿಕರನ್ನು ಸಂಘಟಿಸುವ ಸಮಗ್ರ ಕಾರ್ಯಯೋಜನೆಯೊಂದಿಗೆ ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದ “ಪ್ರಭಾಕರ ಘಾಟೆ” ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ವೇಲು ಮಾತನಾಡಿ, ಕಾರ್ಮಿಕ ಸಂಘಟನೆಗಳು ಬಲಿಷ್ಠವಾಗಬೇಕಾದರೆ ಆಡಳಿತಾತ್ಮಕ ಶಿಸ್ತು, ದಾಖಲಾತಿಗಳ ಸಮರ್ಪಕ ನಿರ್ವಹಣೆ ಹಾಗೂ ಸದಸ್ಯತ್ವ ವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಪ್ರತಿಯೊಂದು ಯೂನಿಯನ್ ಸದಸ್ಯತ್ವ ರಿಜಿಸ್ಟರ್, ಮಿನಿಟ್ ಬುಕ್, ಕ್ಯಾಶ್ ಬುಕ್, ರಶೀದಿ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ನಿಯಮಾನುಸಾರ ನಿರ್ವಹಿಸಬೇಕು. ಕಾರ್ಮಿಕರ ಸಮಸ್ಯೆಗಳನ್ನು ಆಳವಾಗಿ ಅಧ್ಯಯನ ಮಾಡಿ, ಸಂಘಟಿತ ಹೋರಾಟದ ಮೂಲಕ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್. ಎಲ್. ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯಲಿರುವ ಜಿಲ್ಲಾ ಸಮ್ಮೇಳನವು ಸಂಘಟನೆಯ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಬೇಕಿದ್ದು, ಎಲ್ಲಾ ಸಂಯೋಜಿತ ಯೂನಿಯನ್‌ಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಜಿಲ್ಲಾ ಸಮ್ಮೇಳನವು ಸಂಘಟನೆಯ ಶಕ್ತಿ, ಏಕತೆ ಮತ್ತು ಕಾರ್ಯಕ್ಷಮತೆಯನ್ನು ಸಮಾಜದ ಮುಂದೆ ಪ್ರದರ್ಶಿಸುವ ವೇದಿಕೆಯಾಗಲಿದೆ ಎಂದರು.

ಹಿರಿಯ ಮುಖಂಡ ವಿಶ್ವನಾಥ್ ಶೆಟ್ಟಿ ಅವರು ಭಾರತೀಯ ಮಜ್ದೂರ್ ಸಂಘದ ಸುದೀರ್ಘ ಪಯಣ, ಹಿರಿಯ ಕಾರ್ಯಕರ್ತರ ತ್ಯಾಗ ಮತ್ತು ಸಮರ್ಪಣೆಯನ್ನು ಸ್ಮರಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರಾದ ಅನಿಲ್ ಕುಮಾರ್ ಯು . ಅವರು ಮಾತನಾಡಿ, ಭಾರತೀಯ ಮಜ್ದೂರ್ ಸಂಘವು ಕೇವಲ ಕಾರ್ಮಿಕರ ಬೇಡಿಕೆಗಳಿಗಾಗಿ ಹೋರಾಡುವ ಸಂಘಟನೆಯಲ್ಲ; ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರವನ್ನು ಬಲಪಡಿಸುವ ರಾಷ್ಟ್ರೀಯ ಚಳವಳಿಯಾಗಿದೆ ಎಂದು ಹೇಳಿದರು. ಕೇಂದ್ರ ಮತ್ತು ರಾಜ್ಯ ಸಂಘಟನೆಯ ಮಾರ್ಗದರ್ಶನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದ ಅವರು, ಸದಸ್ಯತ್ವ ವೃದ್ಧಿ, ಹೊಸ ಕ್ಷೇತ್ರಗಳ ಕಾರ್ಮಿಕರ ಸಂಘಟನೆ, ಯೂನಿಯನ್‌ಗಳ ಸಬಲೀಕರಣ ಹಾಗೂ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಬಿಎಂಎಸ್ ಜಿಲ್ಲೆಯನ್ನಾಗಿ ರೂಪಿಸುವ ಗುರಿಯೊಂದಿಗೆ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಂಯೋಜಿತ ಯೂನಿಯನ್‌ಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ ಅವರು, ಮುಂಬರುವ ಜಿಲ್ಲಾ ಸಮ್ಮೇಳನವನ್ನು ಐತಿಹಾಸಿಕ ಹಾಗೂ ಯಶಸ್ವಿ ಕಾರ್ಯಕ್ರಮವನ್ನಾಗಿ ರೂಪಿಸಲು ಎಲ್ಲರೂ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ರಾಜ್ಯ ಕಾರ್ಯದರ್ಶಿಗಳಲ್ಲಿ ಒರ್ವರಾದ ಜಯರಾಜ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಪ್ರಮುಖರಾದ ಕುಮಾರನಾಥ್, ಸುದೀಂದ್ರ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಸಂಯೋಜಿತ ಯೂನಿಯನ್‌ಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!