25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿಯ ವಿದ್ಯಾರ್ಥಿ ಸಂಘಟನೆಯಾದ ಮನ್ಶಊಲ್ ಬಯಾನ್ ಸ್ಟೂಡೆಂಟ್ ಅಸೋಸಿಯೇಷನ್‌ನ 2026-27ನೇ ಸಾಲಿನ ಉದ್ಘಾಟನಾ ಕಾರ್ಯಕ್ರಮವು ಜೂ.6ರಂದು ಖಿಳ್ರ್ ಜುಮಾ ಮಸೀದಿಯಲ್ಲಿ ನಡೆಯಿತು.

ಕಾರ್ಯಕ್ರಮವು ವಿದ್ಯಾರ್ಥಿ ಮುಝಮ್ಮಿಲ್ ಅವರ ಖಿರಾಅತ್ ಪಠಣದೊಂದಿಗೆ ಆರಂಭವಾಯಿತು. ಆಗಮಿಸಿದ ಗಣ್ಯರನ್ನು ನವಾಝ್ ಮಾಸ್ಟರ್ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರು ಅಲ್ಲಾಹನ ನಾಮದಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಬೆಳ್ತಂಗಡಿ ಖಿಳ್ರ್ ಜುಮಾ ಮಸೀದಿಯ ಅಧ್ಯಕ್ಷ ಜನಾಬ್ ಅಕ್ಬರ್ ಬೆಳ್ತಂಗಡಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲರಾದ ಯೂನುಸ್ ಅಲಿ ಬಾಖವಿ ಹಾಗೂ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ ಅವರು ಅನುಗ್ರಹ ನುಡಿಗಳನ್ನು ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಾಗ್ಮಿ ಬಹು. ಅಸ್ಲಾಂ ಅಝ್ಹರಿ ಅವರು ನಮಾಝಿನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿಶೇಷ ತರಗತಿ ನಡೆಸಿ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮದ್ ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!