July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಒಮೇಗಾ ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕಾö್ಯನ್ ಫೌಂಡೇಶನ್ ಇವರ ಸಹಯೋಗದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ೫೮೫ ಸೇವಾ ಯೋಜನೆ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗದೀಶ್ ಲಾಯಿಲ ವಹಿಸಿದ್ದರು. ಕಾರ್ಯಕ್ರಮವನ್ನು ಸಿಖಂದರ್ ಪಾಷಾ ಡಿ.ಎನ್ ಉದ್ಘಾಟಿಸಿ ಮಾತನಾಡಿ “ರಾಜಕೇಸರಿ ಸೇವಾ ಟ್ರಸ್ಟ್ ಬಹಳ ಉತ್ತಮವಾದ ಸಂದೇಶದೊAದಿಗೆ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುತ್ತಾ ಬರುತ್ತಿರುವುದು ಬಹಳ ಹೆಮ್ಮೆಯ ವಿಷಯ. ಇಂತಹ ಸಂಸ್ಥೆಗೆ ನಾವೆಲ್ಲ ಕೈಜೋಡಿಸಿದರೆ ಇನ್ನಷ್ಟು ಸಮಾಜಕ್ಕೆ ಕೊಡುಗೆಗಳನ್ನು ನೀಡಲು ಯಶಸ್ವಿಯಾಗುತ್ತದೆ” ಎಂದು ಶುಭ ಹಾರೈಸಿದರು.

ಖ್ಯಾತ ಹಾಸ್ಯ ಯಕ್ಷಗಾನ ಚಕ್ರವರ್ತಿ ಪ್ರಜ್ವಲ್ ಕುಮಾರ್ ಮಾತನಾಡಿ ರಾಜ್ಯಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ನಮ್ಮ ರಾಜ ಕೇಸರಿ ಯಾವ ಸಂದರ್ಭದಲ್ಲಿಯೂ ರಕ್ತದ ಅವಶ್ಯಕತೆ ಇದ್ದಲ್ಲಿ ದೀಪಕ್ ಜಿ ಅವರನ್ನು ಸಂಪರ್ಕಿಸಿದ ಕೂಡಲೇ ರಕ್ತ ಸಿಗುತ್ತದೆ ಇದು ನಮಗೆ ಸಂತೋಷದ ವಿಷಯ ಇಂಥ ಸಂಸ್ಥೆಯು ರಾಜ್ಯದಲ್ಲಿ ಏಕೈಕ ಇರುವುದೆಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಹಿರಿಯ ಹೃದಯ ತಜ್ಞ ಡಾ| ಮುಕುಂದ್, ವರದಿಗಾರರಾದ ಮನೋಹರ್ ಬಳಂಜ, ಜಾರಪ್ಪ ಪೂಜಾರಿ ಬೆಳಾಲು, ಖಾಸಗಿ ಬಸ್ ನೌಕರರ ಸಂಘದ ಗೌರವ ಸಲಹೆಗಾರ ಚಾಬಕ್ಕ, ದುರ್ಗಾ ಕ್ಯಾಟರಿಂಗ್ ಮಾಲಕ ಭಾಸ್ಕರ್ ಕುಲಾಲ್, ಉದ್ಯಮಿ ಸೆಬಾಸ್ಟಿಯನ್ ಮುಂಡಾಜೆ, ಬೆಳ್ತಂಗಡಿ ಸರಕಾರಿ ಮಾದರಿ ಶಾಲೆ ಮುಖ್ಯೋಪಾಧ್ಯಾಯ ಶಿವಾನಂದ ಭಂಡಾರಿ, ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ಉಪಾಧ್ಯಕ್ಷ ಸಂದೀಪ್ ಉಪಸ್ಥಿತರಿದ್ದರು.

ದೀಪಕ್ ಜಿ ಬೆಳ್ತಂಗಡಿ ಸ್ವಾಗತಿಸಿ, ನಿರೂಪಿಸಿದರು. ಜಗದೀಶ್ ವಂದಿಸಿದರು. ೫೦ಕ್ಕಿಂತ ಅಧಿಕ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya
error: Content is protected !!