ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯ, ಕೊಕ್ಕಡ ಗ್ರಾಮ ಪಂಚಾಯತ್ ಉಪ್ಪಾರಪಳಿಕೆ ಸ.ಉ.ಹಿ.ಪ್ರಾ. ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಸಹಯೋಗದಿಂದ ವಿಶ್ವ ಪರಿಸರ ದಿನಾಚರಣೆ ಜೂ.5 ರಂದು ಉಪ್ಪಾರಪಳಿಕೆ ಶಾಲಾ ವಠಾರದಲ್ಲಿ ನಡೆಯಿತು.
ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್ಎಲ್ ಲೋಕೇಶ್, ಪಿಡಿಒ ಗೋಪಾಲಕೃಷ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಕಾಂತ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ, ಉಪ ವಲಯ ಅರಣ್ಯಾಧಿಕಾರಿ ಅಶೋಕ, ಶಾಲಾ ಮುಖ್ಯಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದವರು, ಶಿಕ್ಷಕರು ಉಪಸ್ಥಿತರಿದ್ದರು.












