25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು: ಸಹಕಾರ ಸೇವೆಯೊಂದಿಗೆ ಕಳೆದ 8ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಮಾಜ ಸೇವೆ, ಮಾನವೀಯತೆ ಹಾಗೂ ಪರಸ್ಪರ ಸಹಕಾರದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಖಿದ್ಮತ್ ಗ್ರೂಪ್ ಮಾಚಾರ್‌ನ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಇಸ್ಮಾಯಿಲ್ ಸಅದಿ ಉದ್ಘಾಟಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಯುವಕರು ಸೇವಾ ಮನೋಭಾವದೊಂದಿಗೆ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಚಾರು ಖತೀಬರಾದ ಸಲೀಂ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿ, ಖಿದ್ಮತ್ ಗ್ರೂಪ್ ಇದುವರೆಗೆ ನಡೆಸಿಕೊಂಡು ಬಂದಿರುವ ಸಮಾಜಮುಖಿ ಹಾಗೂ ಮಾನವೀಯ ಸೇವಾ ಕಾರ್ಯಗಳ ಕುರಿತು ವಿವರಿಸಿದರು. ಸಂಘಟನೆಯು ಮುಂದೆಯೂ ಇದೇ ರೀತಿಯ ಸೇವಾ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಬಳಿಕ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಲಹೆಗಾರರಾಗಿ ರಝಕ್ ಹಂದಾನಿ ಹಾಗೂ ಅಶ್ರಫ್ ಬೆಂಗಳೂರು, ಗೌರವ ಅಧ್ಯಕ್ಷರಾಗಿ ಹಾಜಿ ಅಕ್ಬರ್ ಬದ್ರಿಯಾ, ಅಧ್ಯಕ್ಷರಾಗಿ ಆಸೀಫ್ ಕತ್ತಾರ್, ಉಪಾಧ್ಯಕ್ಷರಾಗಿ ಶರೀಫ್ ಮಸ್ಕತ್, ಪ್ರಧಾನ ಕಾರ್ಯದರ್ಶಿಯಾಗಿ ಆರೀಫ್ ಮಾಚಾರ್, ಜೊತೆ ಕಾರ್ಯದರ್ಶಿಯಾಗಿ ಅನ್ಸಾರ್ ಸಅದಿ ಹಾಗೂ ಕೋಶಾಧಿಕಾರಿಯಾಗಿ ಅಝರ್ ಅಂಗಡಿ ಆಯ್ಕೆಯಾಗಿದ್ದಾರೆ.

ಫೀಲ್ಡ್ ಕೋಆರ್ಡಿನೇಟರ್‌ಗಳಾಗಿ ಇಲ್ಯಾಸ್ ಬದನಾಜೆ, ನೌಷದ್ ಬಿ.ಎಂ., ರಿಯಾಜ್ ಬೆದ್ರಳಿಕೆ ಹಾಗೂ ಕಬೀರ್ ಮಿಸ್ಬಾಹಿ ಆಯ್ಕೆಯಾಗಿದ್ದು, ಸದಸ್ಯರಾಗಿ ಶರೀಫ್ ಕೆಳಗಿನ ಮನೆ, ಹನೀಫ್, ಉಸ್ಮಾನ್ ಬೆದ್ರಳಿಕೆ, ಆದಿಲ್ ಅಂಗಡಿ, ಆಸೀಫ್ ಬೊಟ್ಟು, ಅನ್ಸಾರ್ ಹಾಗೂ ಹಾರಿಸ್ ಪಾದೆ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಸಲಾಯಿತು. ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಹಾಗೂ ತುರ್ತು ನೆರವು ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ಸಂಕಲ್ಪವನ್ನು ನೂತನ ಪದಾಧಿಕಾರಿಗಳು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಹಿರಿಯರು, ಸದಸ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ವರದಿ: ಶಝಾ ಶಮ್ಲಾ

Related posts

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya
error: Content is protected !!