25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು: ಮೊಗ್ರು ಗ್ರಾಮ ಬುಳೇರಿಮೊಗ್ರು ಸರಕಾರಿ ಪ್ರೌಢ ಶಾಲೆ ಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ತಮ್ಮಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜ ರವರು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದ್ದಾರೆ .

ಶುದ್ಧ ನೀರಿನ ಸೌಲಭ್ಯವು ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅತ್ಯಗತ್ಯ ಎಂಬುದನ್ನು ಅರಿತು, ಶಾಲೆಯ ಮೂಲಭೂತ ಅಗತ್ಯಕ್ಕೆ ತಕ್ಷಣ ಸ್ಪಂದಿಸಿರುವ ಶಾಸಕರ ಈ ಜನಪರ ಕಾಳಜಿ ನಿಜಕ್ಕೂ ಶ್ಲಾಘನೀಯ. “ಮಕ್ಕಳ ಭವಿಷ್ಯವೇ ನಾಳೆಯ ಬಲಿಷ್ಠ ಸಮಾಜ” ಎಂಬ ಧೈಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶಾಸಕರಿಗೆ ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು, ಹಾಗೂ ಪಿಜಿನ ಮೊಗೇರ, ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು, ಮುಖ್ಯೋಪಾದ್ಯಾಯರು,ಶಿಕ್ಷಕ ವೃಂದ, ಪೋಷಕ ವೃಂದ,ವಿದ್ಯಾರ್ಥಿಗಳು, ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya
error: Content is protected !!