ಬೆಳ್ತಂಗಡಿ: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ 33 ವಿದ್ಯಾರ್ಥಿಗಳಲ್ಲಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ವಿದ್ಯಾರ್ಥಿನಿ ಕು| ರಮ್ಯಶ್ರೀ ಅತ್ಯುತ್ತಮ ಅಂಕಗಳನ್ನು ಗಳಿಸಿ ಆಯ್ಕೆ ಆಗಿರುತ್ತಾರೆ.
ಇವರು ಪಿಲ್ಯ ಗ್ರಾಮದ ಕುದ್ಯಾಡಿ ಕೋಡಿಬಾಳೆ ನಿವಾಸಿ ರಮಾನಂದ ಮತ್ತು ಶ್ರೀಮತಿ ಹೇಮಾವತಿ ದಂಪತಿಯ ಪುತ್ರಿ. ಎನ್ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 12,000 ದಂತೆ ಮುಂದಿನ ನಾಲ್ಕು ವರ್ಷಗಳ ವರೆಗೆ ಈ ವಿದ್ಯಾರ್ಥಿವೇತನವು ದೊರೆಯಲಿದೆ. ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಶಾಂತಿ ನಾಯಕ್ ಹಾಗೂ ಶ್ರೀಮತಿ ಶ್ವೇತಾ ಎಚ್ ಎನ್ ತರಬೇತಿ ನೀಡಿರುತ್ತಾರೆ.












