25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ಪಡಂಗಡಿಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶೇಖರ್ ಕುಕ್ಕೇಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಸಂತೋಷ್ ಕುಮಾರ್ ಜೈನ್ ಮಾಜಿ ಪಂಚಾಯತ್ ಅಧ್ಯಕ್ಷರು, ರಕ್ಷಿತ್ ಬಜಿರೆ ಮಾಲಕರು ಶ್ರೀ ದುರ್ಗ ಇನ್ಸೂರೆನ್ಸ್ ವೇಣೂರು, ಪ್ರೇಮಲತಾ ಶಿಕ್ಷಕಿ, ಡಾ. ಸಂಜತ್, ಡಾ. ದೀಪಿಕಾ, ಡಾ. ಅಂತೋಣಿ, ಸುಧಾಕರ ಪೂಜಾರಿ ನೂಯಿ, ಸನತ್ ಹಾಗೂ ಸಂಪತ್ ಅಂಚನ್ ಕುಕ್ಕೇಡಿ, ಅರುಣ್ ಪೂಜಾರಿ ಗರ್ಡಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 75 ಮಂದಿ ರಕ್ತದಾನ ಮಾಡಿ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು. ರಕ್ತದಾನಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಮುನೀರ್ ಅವರು ನಿರ್ವಹಿಸಿದರು. ನಿಶ್ಚಿತ್ ಗರ್ಡಾಡಿ ವಂದನಾರ್ಪಣೆ ಸಲ್ಲಿಸಿದರು.

ನಿಶಾಂತ್ ಸೇವಾ ಬ್ರಿಗೇಡ್‌ನ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸಿದರು.

Related posts

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!