26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ಪಡಂಗಡಿಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶೇಖರ್ ಕುಕ್ಕೇಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಸಂತೋಷ್ ಕುಮಾರ್ ಜೈನ್ ಮಾಜಿ ಪಂಚಾಯತ್ ಅಧ್ಯಕ್ಷರು, ರಕ್ಷಿತ್ ಬಜಿರೆ ಮಾಲಕರು ಶ್ರೀ ದುರ್ಗ ಇನ್ಸೂರೆನ್ಸ್ ವೇಣೂರು, ಪ್ರೇಮಲತಾ ಶಿಕ್ಷಕಿ, ಡಾ. ಸಂಜತ್, ಡಾ. ದೀಪಿಕಾ, ಡಾ. ಅಂತೋಣಿ, ಸುಧಾಕರ ಪೂಜಾರಿ ನೂಯಿ, ಸನತ್ ಹಾಗೂ ಸಂಪತ್ ಅಂಚನ್ ಕುಕ್ಕೇಡಿ, ಅರುಣ್ ಪೂಜಾರಿ ಗರ್ಡಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 75 ಮಂದಿ ರಕ್ತದಾನ ಮಾಡಿ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು. ರಕ್ತದಾನಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಮುನೀರ್ ಅವರು ನಿರ್ವಹಿಸಿದರು. ನಿಶ್ಚಿತ್ ಗರ್ಡಾಡಿ ವಂದನಾರ್ಪಣೆ ಸಲ್ಲಿಸಿದರು.

ನಿಶಾಂತ್ ಸೇವಾ ಬ್ರಿಗೇಡ್‌ನ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸಿದರು.

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!