ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ” ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!