ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿಯ ವಿದ್ಯಾರ್ಥಿ ಸಂಘಟನೆಯಾದ ಮನ್ಶಊಲ್ ಬಯಾನ್ ಸ್ಟೂಡೆಂಟ್ ಅಸೋಸಿಯೇಷನ್‌ನ 2026-27ನೇ ಸಾಲಿನ ಉದ್ಘಾಟನಾ ಕಾರ್ಯಕ್ರಮವು ಜೂ.6ರಂದು ಖಿಳ್ರ್ ಜುಮಾ ಮಸೀದಿಯಲ್ಲಿ ನಡೆಯಿತು.

ಕಾರ್ಯಕ್ರಮವು ವಿದ್ಯಾರ್ಥಿ ಮುಝಮ್ಮಿಲ್ ಅವರ ಖಿರಾಅತ್ ಪಠಣದೊಂದಿಗೆ ಆರಂಭವಾಯಿತು. ಆಗಮಿಸಿದ ಗಣ್ಯರನ್ನು ನವಾಝ್ ಮಾಸ್ಟರ್ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರು ಅಲ್ಲಾಹನ ನಾಮದಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಬೆಳ್ತಂಗಡಿ ಖಿಳ್ರ್ ಜುಮಾ ಮಸೀದಿಯ ಅಧ್ಯಕ್ಷ ಜನಾಬ್ ಅಕ್ಬರ್ ಬೆಳ್ತಂಗಡಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲರಾದ ಯೂನುಸ್ ಅಲಿ ಬಾಖವಿ ಹಾಗೂ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ ಅವರು ಅನುಗ್ರಹ ನುಡಿಗಳನ್ನು ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಾಗ್ಮಿ ಬಹು. ಅಸ್ಲಾಂ ಅಝ್ಹರಿ ಅವರು ನಮಾಝಿನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿಶೇಷ ತರಗತಿ ನಡೆಸಿ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮದ್ ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya
error: Content is protected !!