ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು: ಮೊಗ್ರು ಗ್ರಾಮ ಬುಳೇರಿಮೊಗ್ರು ಸರಕಾರಿ ಪ್ರೌಢ ಶಾಲೆ ಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ತಮ್ಮಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜ ರವರು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದ್ದಾರೆ .

ಶುದ್ಧ ನೀರಿನ ಸೌಲಭ್ಯವು ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅತ್ಯಗತ್ಯ ಎಂಬುದನ್ನು ಅರಿತು, ಶಾಲೆಯ ಮೂಲಭೂತ ಅಗತ್ಯಕ್ಕೆ ತಕ್ಷಣ ಸ್ಪಂದಿಸಿರುವ ಶಾಸಕರ ಈ ಜನಪರ ಕಾಳಜಿ ನಿಜಕ್ಕೂ ಶ್ಲಾಘನೀಯ. “ಮಕ್ಕಳ ಭವಿಷ್ಯವೇ ನಾಳೆಯ ಬಲಿಷ್ಠ ಸಮಾಜ” ಎಂಬ ಧೈಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶಾಸಕರಿಗೆ ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು, ಹಾಗೂ ಪಿಜಿನ ಮೊಗೇರ, ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು, ಮುಖ್ಯೋಪಾದ್ಯಾಯರು,ಶಿಕ್ಷಕ ವೃಂದ, ಪೋಷಕ ವೃಂದ,ವಿದ್ಯಾರ್ಥಿಗಳು, ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

Related posts

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!