July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

ಅಳದಂಗಡಿ ವಲಯದ ಶಿರ್ಲಾಲು ಎ ಕಾರ್ಯಕ್ಷೇತ್ರದ ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ 25ನೇ ವರ್ಷದ ವಾರ್ಷಿಕೋತ್ಸವ ನಡೆಯಿತು.

ಅಧ್ಯಕ್ಷೆ ಪ್ರೇಮ ಕೋರ್ದೊಟ್ಟು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮುಖಾಂತರ ವಾರ್ಷಿಕೋತ್ಸವವನ್ನು ಉದ್ಘಾಟಿಸಿದರು. ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ಮಾತೃಶ್ರೀ ಅಮ್ಮನವರ ಕನಸನ್ನು ನನಸು ಮಾಡಿದ ಹೆಗ್ಗಳಿಕೆ ಈ ಅನ್ನಪೂರ್ಣೇಶ್ವರಿ ಸಂಘದ್ದು ಹಾಗೂ ಸಂಘ ಎಳೆಯ ಪ್ರಾಯದಲ್ಲಿ ನಮ್ಮ ಸಂಘ ಹೇಗೆ ಇತ್ತು ಎಂಬುದರ ಬಗ್ಗೆ ಮಾಹಿತಿ ನೀಡಿದರು. ನಾಲ್ಕು ಗೋಡೆಯ ಮದ್ಯ ಇದ್ದ ಮಹಿಳೆಯರು ಹೊರಗಿನ ಪ್ರಪಂಚ ನೋಡಿದ್ದೇ ಗ್ರಾಮಾಭಿವೃದ್ಧಿ ಯೋಜನೆಯ ಈ ಅನ್ನಪೂರ್ಣನೇಶ್ವರಿ ಸಂಘದಿಂದ ಎಂದು ತಿಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಲಯ ಮೇಲ್ವಿಚಾರಕರಾದ ಯಶೋಧ ರವರು ಮತ್ತು ತರಬೇತಿಯನ್ನು ಪಡೆಯಲು ಬಂದ ಮೇಲ್ವಿಚಾರಕ ವಸಂತ ರವರು ಸಂಘಕ್ಕೆ ಶುಭ ಹಾರೈಸಿದರು. 25 ವರ್ಷದಿಂದ ಸಂಘ ನಡೆದು ಬಂದ ದಾರಿ ಮತ್ತು ಅದರ ಸದ್ವಿನಿಯೋಗ ಪಡೆದ ಬಗ್ಗೆ ಅನಿಸಿಕೆಯನ್ನು ಡೀಕಮ್ಮ ಕರ್ದೋಟ್ಟು ಮತ್ತು ಹರಿಣಾಕ್ಷಿಯವರು ವ್ಯಕ್ತಪಡಿಸಿದರು. ವಾರದ ಸಭೆ ನಡೆಯುವ ಮನೆಯವರಾದ ಶ್ರೀಮತಿ ಮನೀಷ ಲಕ್ಷ್ಮಣ ಪೂಜಾರಿಯವರು ಮಹಿಳೆಯರ ತಾಳ್ಮೆ ಮತ್ತು ಸಹನೆಯ ಬಗ್ಗೆ ಮಾತನಾಡಿದರು. ಸೇವಾ ಪ್ರತಿನಿಧಿಯವರಾದ ಚಂದ್ರವತಿಯವರು ತಮ್ಮ ಸಂಘದ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿ ಸಂಘಕ್ಕೆ ಶುಭ ಹಾರೈಸಿದರು.

ಹರಿಣಾಕ್ಷಿ ನಿರೂಪಿಸಿ, ಶೋಭಾ ಕರ್ದೋಟ್ಟು ಸ್ವಾಗತಿಸಿದರು . ಶಿಲ್ಪ ಬಾರ್ಲೊಡಿ ಬೈಲ್ ಧನ್ಯವಾದವಿತ್ತರು.

Related posts

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya
error: Content is protected !!