July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

ಬೆಳ್ತಂಗಡಿ : ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಸಂಚಾಲಕರಾದ, ಹಾಗೂ ಶ್ರೀ ಕ್ಷೇತ್ರದ ಅನ್ನಪೂರ್ಣ ಅನ್ನಛತ್ರದ ಮುಖ್ಯ ಪ್ರಬಂಧಕರಾದ ಜಿ ಸುಬ್ರಹ್ಮಣ್ಯ ಪ್ರಸಾದ್ ರವರ ಪುತ್ರಿ ಮಾಧುರ್ಯ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅವರ ಸ್ವಗೃಹಸ್ಪತಿ ಸುಮೇಧಾ ದಲ್ಲಿ ಸನ್ಮಾನ ನಡೆಸಲಾಯಿತು.

ಈ ವೇಳೆ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ ಈ ಅದ್ಭುತ ಕಲಿಕೆಯ ದಿನಗಳು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿ. ಶಿಸ್ತು, ಕಠಿಣ ಪರಿಶ್ರಮ ಮತ್ತು ಸದಾ ಕಲಿಯುವ ಆಸಕ್ತಿ ನಿಮ್ಮದಾಗಲಿ. ನಿಮ್ಮ ಕನಸುಗಳೆಲ್ಲವೂ ನನಸಾಗುವಂತೆ ಆ ಭಗವಂತನು ನಿಮಗೆ ಸನ್ಮತಿ ನೀಡಲಿ. ಸದಾ ಉತ್ಸಾಹದಿಂದ ಹೊಸ ವಿಷಯಗಳನ್ನು ಕಲಿಯುತ್ತಾ ಜೀವನದಲ್ಲಿ ಮುನ್ನಡೆಯಿರಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿ ಸುಬ್ರಹ್ಮಣ್ಯ ಪ್ರಸಾದ್, ತಾಯಿ ಮಧುರಾ, ತಮ್ಮ ಧನ್ವಿಕುಮಾರ್, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ, ಗೌರವ ಸಲಹೆಗಾರರಾದ ನಾಗೇಶ್ ಬಿ ನೆರಿಯ, ಕಾರ್ಯದರ್ಶಿ ಚಂದ್ರಶೇಖರಗೌಡ ಇಂದಬೆಟ್ಟು , ಜೊತೆಕಾರ್ಯದರ್ಶಿ ಶ್ರೀಮತಿ ಪ್ರತಿಮಾ, ಕೋಶಾಧಿಕಾರಿ ಗಣೇಶ್ ಕನ್ನಾಜೆ, ಗುರುವಾಯನಕೆರೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಗಳಾದ ಸಂದೇಶ್ ಮದ್ದಡ್ಕ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಉಜಿರೆ, ವಲಯದ ಅಧ್ಯಕ್ಷರಾದ ಶ್ರೀಕೃಷ್ಣಯ್ಯ ಆಚಾರ್, ಶ್ರೀಮಂಜುನಾಥ್, ಶ್ರೀಮತಿ ವೇದಾವತಿ ಹೊನ್ನೇಶ್ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!