25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

ಬೆಳ್ತಂಗಡಿ : ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಸಂಚಾಲಕರಾದ, ಹಾಗೂ ಶ್ರೀ ಕ್ಷೇತ್ರದ ಅನ್ನಪೂರ್ಣ ಅನ್ನಛತ್ರದ ಮುಖ್ಯ ಪ್ರಬಂಧಕರಾದ ಜಿ ಸುಬ್ರಹ್ಮಣ್ಯ ಪ್ರಸಾದ್ ರವರ ಪುತ್ರಿ ಮಾಧುರ್ಯ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅವರ ಸ್ವಗೃಹಸ್ಪತಿ ಸುಮೇಧಾ ದಲ್ಲಿ ಸನ್ಮಾನ ನಡೆಸಲಾಯಿತು.

ಈ ವೇಳೆ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ ಈ ಅದ್ಭುತ ಕಲಿಕೆಯ ದಿನಗಳು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿ. ಶಿಸ್ತು, ಕಠಿಣ ಪರಿಶ್ರಮ ಮತ್ತು ಸದಾ ಕಲಿಯುವ ಆಸಕ್ತಿ ನಿಮ್ಮದಾಗಲಿ. ನಿಮ್ಮ ಕನಸುಗಳೆಲ್ಲವೂ ನನಸಾಗುವಂತೆ ಆ ಭಗವಂತನು ನಿಮಗೆ ಸನ್ಮತಿ ನೀಡಲಿ. ಸದಾ ಉತ್ಸಾಹದಿಂದ ಹೊಸ ವಿಷಯಗಳನ್ನು ಕಲಿಯುತ್ತಾ ಜೀವನದಲ್ಲಿ ಮುನ್ನಡೆಯಿರಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿ ಸುಬ್ರಹ್ಮಣ್ಯ ಪ್ರಸಾದ್, ತಾಯಿ ಮಧುರಾ, ತಮ್ಮ ಧನ್ವಿಕುಮಾರ್, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ, ಗೌರವ ಸಲಹೆಗಾರರಾದ ನಾಗೇಶ್ ಬಿ ನೆರಿಯ, ಕಾರ್ಯದರ್ಶಿ ಚಂದ್ರಶೇಖರಗೌಡ ಇಂದಬೆಟ್ಟು , ಜೊತೆಕಾರ್ಯದರ್ಶಿ ಶ್ರೀಮತಿ ಪ್ರತಿಮಾ, ಕೋಶಾಧಿಕಾರಿ ಗಣೇಶ್ ಕನ್ನಾಜೆ, ಗುರುವಾಯನಕೆರೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಗಳಾದ ಸಂದೇಶ್ ಮದ್ದಡ್ಕ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಉಜಿರೆ, ವಲಯದ ಅಧ್ಯಕ್ಷರಾದ ಶ್ರೀಕೃಷ್ಣಯ್ಯ ಆಚಾರ್, ಶ್ರೀಮಂಜುನಾಥ್, ಶ್ರೀಮತಿ ವೇದಾವತಿ ಹೊನ್ನೇಶ್ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯ ಇಂದಿನ ಮಹಜರು ಅಂತ್ಯಗೊಳಿಸಿದ ಸಿಐಡಿ ತಂಡ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya
error: Content is protected !!