July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇವರ ವತಿಯಿಂದ ಬಿಲ್ಲವ ಸಮಾಜದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಮುಖ್ಯ ಅತಿಥಿಯಾದ ಶ್ರೀಮತಿ ಪುಷ್ಪಾ ನಿತ್ಯಾನಂದ ನಾವರ ರವರು ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ನೀಡಬೇಕು ಎಂದರು.

ನಾವೆಲ್ಲರೂ ಒಮ್ಮೆಯಾದರೂ ಶಿವಗಿರಿಗೆ ಭೇಟಿ ನೀಡಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು ಹಾಗೂ ಮಕ್ಕಳಿಗೂ ಈ ಬಗ್ಗೆ ತಿಳುವಳಿಕೆ ಮಾಡಿಸುವ ಜವಾಬ್ದಾರಿ ಪೋಷಕರಿಗೆ ಇರಬೇಕೆಂದು ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಸಂಕೇತ ಪೂಜಾರಿ ತಿಳಿಸಿದರು,

ಕಾರ್ಯಕ್ರಮದ ಅಧ್ಯಕ್ಷ ವಸಂತ ಪೂಜಾರಿ ಮಾತಾಡಿ ಪುಸ್ತಕ ಪಡಕೊಂಡ ಎಲ್ಲಾ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಉತ್ತುಂಗಕ್ಕೆ ಏರುವಂತಾಗಲಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕುತ್ಲೂರು ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ , ಸುಲ್ಕೇರಿಯ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಗೌರವಾಧ್ಯಕ್ಷ ಸುಧೀರ್ ಎಸ್ .ಪಿ, ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಪೂಜಾರಿ ಉಪಾಧ್ಯಕ್ಷ ಶಂಕರ ಪೂಜಾರಿ ಉಪಸ್ಥಿತರಿದ್ದರು. ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ ಪೂಜಾರಿ ಸ್ವಾಗತಿಸಿದರು, ವಸಂತಿ ಧನ್ಯವಾದವಿತ್ತರು.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya
error: Content is protected !!