26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು ನಡೆಯಿತು.

ಸಂತ ಅಂತೋನಿ ಚರ್ಚ್ ಧರ್ಮಗುರು ಅಬೆಲ್ ಲೋಬೊ ಆಶೀರ್ವಚನ ಮತ್ತು ಹಸ್ತಾಂತರವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿ ಮನೆ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಎಂ.,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಮರ್ಲಿನ್ ಡಿಸೋಜ, SMI ಕಾನ್ವೆಂಟ್ ಉಜಿರೆ ಸುಪೀರಿಯರ್ಸಿಸ್ಟರ್ ನ್ಯಾನ್ಸಿ ಡಾಯಸ್, ಉಜಿರೆ ಚರ್ಚ್ ಪಾಲಾನಾ ಆಯೋಗ ಸಂಯೋಜಕ ವಲೇರಿಯನ್ ಪಿಂಟೋ, ಎಸ್.ಸಿ.ಸಿ ಉಜಿರೆ ಚರ್ಚ್ ಸಂಚಾಲಕಿ ಲಿಡಿಯಾ ರೊಡ್ರಿಗಸ್, ಎಸ್.ವಿ.ಪಿ ಉಜಿರೆ ಘಟಕ ಅಧ್ಯಕ್ಷ ಸೆಬಾಸ್ಟಿಯನ್ ಡಿಸೋಜ, ಕುಟುಂಬ ಆಯೋಗ ಸಂಚಾಲಕರು, ಗುರಿಕಾರರು ವೆಲಂಕಣಿ ವಾಳೆ ಉಪಸ್ಥಿತರಿದ್ದರು.


ವಸತಿ ಯೋಜನೆಯ ಮೇಲ್ವಿಚಾರಕರು ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ವಾಳೆ ಪ್ರತಿನಿಧಿ ಡಾ. ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ವಾಳೆ ಪ್ರತಿನಿಧಿ ಹಿಲ್ಡಾ ಮೋರಾಸ್ ಧನ್ಯವಾಧವಿತ್ತರು.

Related posts

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya
error: Content is protected !!