July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ” ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!