26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿಯ ವಿದ್ಯಾರ್ಥಿ ಸಂಘಟನೆಯಾದ ಮನ್ಶಊಲ್ ಬಯಾನ್ ಸ್ಟೂಡೆಂಟ್ ಅಸೋಸಿಯೇಷನ್‌ನ 2026-27ನೇ ಸಾಲಿನ ಉದ್ಘಾಟನಾ ಕಾರ್ಯಕ್ರಮವು ಜೂ.6ರಂದು ಖಿಳ್ರ್ ಜುಮಾ ಮಸೀದಿಯಲ್ಲಿ ನಡೆಯಿತು.

ಕಾರ್ಯಕ್ರಮವು ವಿದ್ಯಾರ್ಥಿ ಮುಝಮ್ಮಿಲ್ ಅವರ ಖಿರಾಅತ್ ಪಠಣದೊಂದಿಗೆ ಆರಂಭವಾಯಿತು. ಆಗಮಿಸಿದ ಗಣ್ಯರನ್ನು ನವಾಝ್ ಮಾಸ್ಟರ್ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರು ಅಲ್ಲಾಹನ ನಾಮದಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಬೆಳ್ತಂಗಡಿ ಖಿಳ್ರ್ ಜುಮಾ ಮಸೀದಿಯ ಅಧ್ಯಕ್ಷ ಜನಾಬ್ ಅಕ್ಬರ್ ಬೆಳ್ತಂಗಡಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲರಾದ ಯೂನುಸ್ ಅಲಿ ಬಾಖವಿ ಹಾಗೂ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ ಅವರು ಅನುಗ್ರಹ ನುಡಿಗಳನ್ನು ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಾಗ್ಮಿ ಬಹು. ಅಸ್ಲಾಂ ಅಝ್ಹರಿ ಅವರು ನಮಾಝಿನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿಶೇಷ ತರಗತಿ ನಡೆಸಿ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮದ್ ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!