July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು: ಸಹಕಾರ ಸೇವೆಯೊಂದಿಗೆ ಕಳೆದ 8ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಮಾಜ ಸೇವೆ, ಮಾನವೀಯತೆ ಹಾಗೂ ಪರಸ್ಪರ ಸಹಕಾರದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಖಿದ್ಮತ್ ಗ್ರೂಪ್ ಮಾಚಾರ್‌ನ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಇಸ್ಮಾಯಿಲ್ ಸಅದಿ ಉದ್ಘಾಟಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಯುವಕರು ಸೇವಾ ಮನೋಭಾವದೊಂದಿಗೆ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಚಾರು ಖತೀಬರಾದ ಸಲೀಂ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿ, ಖಿದ್ಮತ್ ಗ್ರೂಪ್ ಇದುವರೆಗೆ ನಡೆಸಿಕೊಂಡು ಬಂದಿರುವ ಸಮಾಜಮುಖಿ ಹಾಗೂ ಮಾನವೀಯ ಸೇವಾ ಕಾರ್ಯಗಳ ಕುರಿತು ವಿವರಿಸಿದರು. ಸಂಘಟನೆಯು ಮುಂದೆಯೂ ಇದೇ ರೀತಿಯ ಸೇವಾ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಬಳಿಕ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಲಹೆಗಾರರಾಗಿ ರಝಕ್ ಹಂದಾನಿ ಹಾಗೂ ಅಶ್ರಫ್ ಬೆಂಗಳೂರು, ಗೌರವ ಅಧ್ಯಕ್ಷರಾಗಿ ಹಾಜಿ ಅಕ್ಬರ್ ಬದ್ರಿಯಾ, ಅಧ್ಯಕ್ಷರಾಗಿ ಆಸೀಫ್ ಕತ್ತಾರ್, ಉಪಾಧ್ಯಕ್ಷರಾಗಿ ಶರೀಫ್ ಮಸ್ಕತ್, ಪ್ರಧಾನ ಕಾರ್ಯದರ್ಶಿಯಾಗಿ ಆರೀಫ್ ಮಾಚಾರ್, ಜೊತೆ ಕಾರ್ಯದರ್ಶಿಯಾಗಿ ಅನ್ಸಾರ್ ಸಅದಿ ಹಾಗೂ ಕೋಶಾಧಿಕಾರಿಯಾಗಿ ಅಝರ್ ಅಂಗಡಿ ಆಯ್ಕೆಯಾಗಿದ್ದಾರೆ.

ಫೀಲ್ಡ್ ಕೋಆರ್ಡಿನೇಟರ್‌ಗಳಾಗಿ ಇಲ್ಯಾಸ್ ಬದನಾಜೆ, ನೌಷದ್ ಬಿ.ಎಂ., ರಿಯಾಜ್ ಬೆದ್ರಳಿಕೆ ಹಾಗೂ ಕಬೀರ್ ಮಿಸ್ಬಾಹಿ ಆಯ್ಕೆಯಾಗಿದ್ದು, ಸದಸ್ಯರಾಗಿ ಶರೀಫ್ ಕೆಳಗಿನ ಮನೆ, ಹನೀಫ್, ಉಸ್ಮಾನ್ ಬೆದ್ರಳಿಕೆ, ಆದಿಲ್ ಅಂಗಡಿ, ಆಸೀಫ್ ಬೊಟ್ಟು, ಅನ್ಸಾರ್ ಹಾಗೂ ಹಾರಿಸ್ ಪಾದೆ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಸಲಾಯಿತು. ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಹಾಗೂ ತುರ್ತು ನೆರವು ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ಸಂಕಲ್ಪವನ್ನು ನೂತನ ಪದಾಧಿಕಾರಿಗಳು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಹಿರಿಯರು, ಸದಸ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ವರದಿ: ಶಝಾ ಶಮ್ಲಾ

Related posts

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya
error: Content is protected !!