ವೇಣೂರು: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಪಿಎಂಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು| ಕ್ಷಮಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಆಯ್ಕೆ ಆಗಿರುತ್ತಾರೆ.
ಇವರು ಹೊಸಪಟ್ಣ ಮಜಲು ನಿವಾಸಿ ರಾಜು ಪೂಜಾರಿ ಮತ್ತು ಸುಮಿತ್ರ ದಂಪತಿಯ ಪುತ್ರಿ. ಎನ್ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 12,000 ದಂತೆ ಮುಂದಿನ ನಾಲ್ಕು ವರ್ಷಗಳ ವರೆಗೆ ಈ ವಿದ್ಯಾರ್ಥಿವೇತನವು ದೊರೆಯಲಿದೆ.












