July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

ಬೆಳ್ತಂಗಡಿ : ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಸಂಚಾಲಕರಾದ, ಹಾಗೂ ಶ್ರೀ ಕ್ಷೇತ್ರದ ಅನ್ನಪೂರ್ಣ ಅನ್ನಛತ್ರದ ಮುಖ್ಯ ಪ್ರಬಂಧಕರಾದ ಜಿ ಸುಬ್ರಹ್ಮಣ್ಯ ಪ್ರಸಾದ್ ರವರ ಪುತ್ರಿ ಮಾಧುರ್ಯ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅವರ ಸ್ವಗೃಹಸ್ಪತಿ ಸುಮೇಧಾ ದಲ್ಲಿ ಸನ್ಮಾನ ನಡೆಸಲಾಯಿತು.

ಈ ವೇಳೆ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ ಈ ಅದ್ಭುತ ಕಲಿಕೆಯ ದಿನಗಳು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿ. ಶಿಸ್ತು, ಕಠಿಣ ಪರಿಶ್ರಮ ಮತ್ತು ಸದಾ ಕಲಿಯುವ ಆಸಕ್ತಿ ನಿಮ್ಮದಾಗಲಿ. ನಿಮ್ಮ ಕನಸುಗಳೆಲ್ಲವೂ ನನಸಾಗುವಂತೆ ಆ ಭಗವಂತನು ನಿಮಗೆ ಸನ್ಮತಿ ನೀಡಲಿ. ಸದಾ ಉತ್ಸಾಹದಿಂದ ಹೊಸ ವಿಷಯಗಳನ್ನು ಕಲಿಯುತ್ತಾ ಜೀವನದಲ್ಲಿ ಮುನ್ನಡೆಯಿರಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿ ಸುಬ್ರಹ್ಮಣ್ಯ ಪ್ರಸಾದ್, ತಾಯಿ ಮಧುರಾ, ತಮ್ಮ ಧನ್ವಿಕುಮಾರ್, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ, ಗೌರವ ಸಲಹೆಗಾರರಾದ ನಾಗೇಶ್ ಬಿ ನೆರಿಯ, ಕಾರ್ಯದರ್ಶಿ ಚಂದ್ರಶೇಖರಗೌಡ ಇಂದಬೆಟ್ಟು , ಜೊತೆಕಾರ್ಯದರ್ಶಿ ಶ್ರೀಮತಿ ಪ್ರತಿಮಾ, ಕೋಶಾಧಿಕಾರಿ ಗಣೇಶ್ ಕನ್ನಾಜೆ, ಗುರುವಾಯನಕೆರೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಗಳಾದ ಸಂದೇಶ್ ಮದ್ದಡ್ಕ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಉಜಿರೆ, ವಲಯದ ಅಧ್ಯಕ್ಷರಾದ ಶ್ರೀಕೃಷ್ಣಯ್ಯ ಆಚಾರ್, ಶ್ರೀಮಂಜುನಾಥ್, ಶ್ರೀಮತಿ ವೇದಾವತಿ ಹೊನ್ನೇಶ್ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!