25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

ಬೆಳ್ತಂಗಡಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮಿಯಾಗಿರುವ ಬೆಳ್ತಂಗಡಿಯ ತಿಮ್ಮಪ್ಪ (ರಾಘವ ) ಶೆಟ್ಟಿಯವರು ತನ್ನ ಹುಟ್ಟುಹಬ್ಬದಂದು ವಿಶೇಷ ಸೇವೆಯೊಂದನ್ನು ಮಾಡಿದ್ದಾರೆ. ಸಾಂಗ್ಲಿ ಜಿಲ್ಲೆಯ ಹೊರಪ್ರದೇಶ ಮಿರಾಜ್ ಭೋಸೆ ಪರ್ವತ ತಪ್ಪಲಿನಲ್ಲಿ ಸುಮಾರು 20 ಎಕ್ರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಇದರ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ ನೀಡಿದ್ದಾರೆ.

ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಗೋಶಾಲೆ, ಜ್ಞಾನ ಮಂದಿರ, ಧ್ಯಾನ ಮಂದಿರ, ಯೋಗ ಕುಟೀರ, ಅನ್ನ ದಾಸೋಹ ಕಾರ್ಯಗಳು ನಿರಂತರವಾಗಿ ನೆರವೇರಲಿದೆ. ತಿಮ್ಮಪ್ಪ ಶೆಟ್ಟಿಯವರು ಸಾಂಗ್ಲಿ ಪರಿಸರದಲ್ಲಿ ಇಡ್ಲಿ ತಿಮ್ಮಪ್ಪರೆಂದೇ ಖ್ಯಾತರಾಗಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!