July 25, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

ಕನ್ಯಾಡಿ 2 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಕಾರ್ಯಕ್ರಮ ಮತ್ತು”ಪೋಷಕರ – ಶಿಕ್ಷಕರ ಮಹಾ ಸಭೆ” ಇತ್ತೀಚೆಗೆ ನಡೆಯಿತು.

ಅತಿಥಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಧರ್ಮಸ್ಥಳ, ಪವಿತ್ರ ಸುಕುಮಾರ ಶೆಟ್ಟಿ , ಎಸ್ ಡಿ ಎಮ್ ಸಿ ಅಧ್ಯಕ್ಷ ಕೆ.ನಂದ , ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , . ನೀಲಕಂಠ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸುದರ್ಶನ್ ಕನ್ಯಾಡಿ, ಕಿರಣ್ , ಎಸ್‌ಡಿ ಎಂ ಸಿ ಯ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ . ಎನ್ ಮತ್ತು ಶಿಕ್ಷಕ ವೃಂದ , ಪೋಷಕ ವೃಂದದವರು ಉಪಸ್ಥಿತರಿದ್ದರು.

ನಂತರ ಪೋಷಕ ಶಿಕ್ಷಕರ ಮಹಾ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಶುಭ ಆರಂಭಗೊಂಡಿತು. ಪೋಷಕರ ಸಮ್ಮುಖದಲ್ಲಿ ಅತಿಥಿಗಳ ಕೈಯಿಂದ ಉಚಿತ ಪುಸ್ತಕವನ್ನು ಸಾಂಕೇತಿಕವಾಗಿ ವಿತರಿಸಲಾಯಿತು . ಪೋಷಕರಿಗೆ ಶೈಕ್ಷಣಿಕ ಮಾಹಿತಿಗಳನ್ನು ಮುಖ್ಯೋಪಾಧ್ಯಾಯಿನಿ ಪುಷ್ಪಾ ಎನ್ ನೀಡಿದರು. ಶ್ರೀಮತಿ ಗಾಯತ್ರಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಧರ್ಮಸ್ಥಳ ಇವರು ಶೈಕ್ಷಣಿಕವಾಗಿ ಮಕ್ಕಳಿಗೆ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಪೋಷಕರ ಮತ್ತು ಸಮಿತಿಯವರ ಪಾತ್ರದ ಬಗ್ಗೆ ತಿಳಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಹಿರಿಯ ವಿದ್ಯಾರ್ಥಿ ಹಾಗೂ ಗೌರವ ಸಲಹೆಗಾರರಾಗಿ ರಾಜೇಂದ್ರ ಆಜ್ರಿಯವರು ಶುಭವನ್ನು ಹಾರೈಸಿದರು . ಸಹಶಿಕ್ಷಕಿ ದೀಪಿಕಾ ಸ್ವಾಗತಿಸಿ , ಶ್ರೀಮತಿ ಜೆಸಿಂತಾ ನೊರೊನ್ಹಾ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!