July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ 23 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರ ಮೊದಲ ಹಂತದ ಕಾಮಗಾರಿಗೆ 9 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಹಲವು ವರ್ಷಗಳಿಂದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಿಕರು ಸಲ್ಲಿಸುತ್ತಿದ್ದ ಬೇಡಿಕೆಗೆ ಇದೀಗ ರಾಜ್ಯ ಸರಕಾರದಿಂದ ಸ್ಪಂದನೆ ದೊರೆತಿದ್ದು, ಜೂ.14 ರಂದು ಬೆಳ್ತಂಗಡಿ ನೂತನ ನ್ಯಾಯಾಲಯದ ಶಂಕುಸ್ಥಾಪಣೆಯಾಗಲಿದ್ದು ಬಹುಕಾಲದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಬೆಳ್ತಂಗಡಿ ವಕೀಲರ ಸಂಘ ಕಳೆದ 10 – 12 ವರ್ಷಗಳಿಂದ ನಿರಂತರವಾಗಿ ಈ ಹಿಂದಿನ ಸರ್ಕಾರಗಳ ಗಮನ ಸೆಳೆಯುತ್ತಾ ಬಂದಿದೆ.

ಈ ಕುರಿತು ಹಿಂದಿನ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಾನೂನು ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೋಳಿ ಬಳಿ ವಕೀಲರ ನಿಯೋಗವನ್ನು ಕರಕೊಂಡು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ಇವರು ಮನವಿಗಳನ್ನು ನೀಡಿದ್ದರ ಫಲವಾಗಿ ರಾಜ್ಯ ಸರಕಾರದಿಂದ ಅನುದಾನವನ್ನು ಒದಗಿಸಿರುವುದರಲ್ಲಿ ಸಫಲರಾದ ರಕ್ಷಿತ್ ಶಿವರಾಮ್ ಅವರಿಗೆ ಜಿಲ್ಲಾ ಕೆ.ಡಿ.ಪಿ ಸದಸ್ಯನಾಗಿ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸದಸ್ಯನಾಗಿ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

ಅಲ್ಲದೆ ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಹಾಗೂ ಐವನ್ ಡಿಸೋಜ ಅವರು ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದದ್ದಾಕ್ಕಾಗಿ ಅಬಿನಂದಿಸುತ್ತೇನೆ ಎಂದು ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿದ್ದಾರೆ

Related posts

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
error: Content is protected !!