24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

ಕನ್ಯಾಡಿ 2 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಕಾರ್ಯಕ್ರಮ ಮತ್ತು”ಪೋಷಕರ – ಶಿಕ್ಷಕರ ಮಹಾ ಸಭೆ” ಇತ್ತೀಚೆಗೆ ನಡೆಯಿತು.

ಅತಿಥಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಧರ್ಮಸ್ಥಳ, ಪವಿತ್ರ ಸುಕುಮಾರ ಶೆಟ್ಟಿ , ಎಸ್ ಡಿ ಎಮ್ ಸಿ ಅಧ್ಯಕ್ಷ ಕೆ.ನಂದ , ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , . ನೀಲಕಂಠ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸುದರ್ಶನ್ ಕನ್ಯಾಡಿ, ಕಿರಣ್ , ಎಸ್‌ಡಿ ಎಂ ಸಿ ಯ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ . ಎನ್ ಮತ್ತು ಶಿಕ್ಷಕ ವೃಂದ , ಪೋಷಕ ವೃಂದದವರು ಉಪಸ್ಥಿತರಿದ್ದರು.

ನಂತರ ಪೋಷಕ ಶಿಕ್ಷಕರ ಮಹಾ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಶುಭ ಆರಂಭಗೊಂಡಿತು. ಪೋಷಕರ ಸಮ್ಮುಖದಲ್ಲಿ ಅತಿಥಿಗಳ ಕೈಯಿಂದ ಉಚಿತ ಪುಸ್ತಕವನ್ನು ಸಾಂಕೇತಿಕವಾಗಿ ವಿತರಿಸಲಾಯಿತು . ಪೋಷಕರಿಗೆ ಶೈಕ್ಷಣಿಕ ಮಾಹಿತಿಗಳನ್ನು ಮುಖ್ಯೋಪಾಧ್ಯಾಯಿನಿ ಪುಷ್ಪಾ ಎನ್ ನೀಡಿದರು. ಶ್ರೀಮತಿ ಗಾಯತ್ರಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಧರ್ಮಸ್ಥಳ ಇವರು ಶೈಕ್ಷಣಿಕವಾಗಿ ಮಕ್ಕಳಿಗೆ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಪೋಷಕರ ಮತ್ತು ಸಮಿತಿಯವರ ಪಾತ್ರದ ಬಗ್ಗೆ ತಿಳಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಹಿರಿಯ ವಿದ್ಯಾರ್ಥಿ ಹಾಗೂ ಗೌರವ ಸಲಹೆಗಾರರಾಗಿ ರಾಜೇಂದ್ರ ಆಜ್ರಿಯವರು ಶುಭವನ್ನು ಹಾರೈಸಿದರು . ಸಹಶಿಕ್ಷಕಿ ದೀಪಿಕಾ ಸ್ವಾಗತಿಸಿ , ಶ್ರೀಮತಿ ಜೆಸಿಂತಾ ನೊರೊನ್ಹಾ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!