30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ 23 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರ ಮೊದಲ ಹಂತದ ಕಾಮಗಾರಿಗೆ 9 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಹಲವು ವರ್ಷಗಳಿಂದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಿಕರು ಸಲ್ಲಿಸುತ್ತಿದ್ದ ಬೇಡಿಕೆಗೆ ಇದೀಗ ರಾಜ್ಯ ಸರಕಾರದಿಂದ ಸ್ಪಂದನೆ ದೊರೆತಿದ್ದು, ಜೂ.14 ರಂದು ಬೆಳ್ತಂಗಡಿ ನೂತನ ನ್ಯಾಯಾಲಯದ ಶಂಕುಸ್ಥಾಪಣೆಯಾಗಲಿದ್ದು ಬಹುಕಾಲದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಬೆಳ್ತಂಗಡಿ ವಕೀಲರ ಸಂಘ ಕಳೆದ 10 – 12 ವರ್ಷಗಳಿಂದ ನಿರಂತರವಾಗಿ ಈ ಹಿಂದಿನ ಸರ್ಕಾರಗಳ ಗಮನ ಸೆಳೆಯುತ್ತಾ ಬಂದಿದೆ.

ಈ ಕುರಿತು ಹಿಂದಿನ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಾನೂನು ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೋಳಿ ಬಳಿ ವಕೀಲರ ನಿಯೋಗವನ್ನು ಕರಕೊಂಡು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ಇವರು ಮನವಿಗಳನ್ನು ನೀಡಿದ್ದರ ಫಲವಾಗಿ ರಾಜ್ಯ ಸರಕಾರದಿಂದ ಅನುದಾನವನ್ನು ಒದಗಿಸಿರುವುದರಲ್ಲಿ ಸಫಲರಾದ ರಕ್ಷಿತ್ ಶಿವರಾಮ್ ಅವರಿಗೆ ಜಿಲ್ಲಾ ಕೆ.ಡಿ.ಪಿ ಸದಸ್ಯನಾಗಿ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸದಸ್ಯನಾಗಿ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

ಅಲ್ಲದೆ ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಹಾಗೂ ಐವನ್ ಡಿಸೋಜ ಅವರು ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದದ್ದಾಕ್ಕಾಗಿ ಅಬಿನಂದಿಸುತ್ತೇನೆ ಎಂದು ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿದ್ದಾರೆ

Related posts

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya
error: Content is protected !!