29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ, ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ ನಡೆಯಿತು.

ಕೀರ್ತಿ ಜ್ಞಾನವಿಕಾಸ ಕೇಂದ್ರದಲ್ಲಿ ಮೇಲ್ವಿಚಾರಕರಾದ ರಾಮ್ ಕುಮಾರ್ ಮಾಹಿತಿಯನ್ನು ನೀಡುತ್ತಾ ಕುಟುಂಬದಲ್ಲಿ ಅತೀ ಮುಖ್ಯವಾಗಿ ತಾಯಿಯು ಮನೆಯ ಎಲ್ಲಾ ಸದಸ್ಯರನ್ನು ಸಮಾನತೆಯಲ್ಲಿ ಪ್ರೀತಿಯಿಂದ ನೋಡಿಕೊಂಡಾಗ, ಮಕ್ಕಳು ಮತ್ತು ಮನೆಯವರು ಕೂಡ ಪರಸ್ಪರ ಹೊಂದಾಣಿಕೆಯೊಂದಿಗೆ ಪ್ರತಿಯೊಂದು ವಿಚಾರಗಳನ್ನು ಮುಕ್ತವಾಗಿ ಮಾತನಾಡಿಕೊಂಡು, ಸಮಾನವಾಗಿ ಸ್ವೀಕರಿಸಿ ಬದುಕನ್ನು ಕಟ್ಟಿಕೊಂಡಾಗ ಆ ಮನೆಯ ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ರಾಜ್ಯದ್ಯಂತ ಇಂದು ಜ್ಞಾನವಿಕಾಸ ಕೇಂದ್ರದ ಮೂಲಕವಾಗಿ ಮಹಿಳೆಯರ ಸಾಮಾಜಿಕವಾಗಿ ಆರ್ಥಿಕ ಸಬಲೀಕರಣದೊಂದಿಗೆ ಪ್ರಗತಿಯನ್ನು ಹೊಂದಿದ್ದು,ಸಮಾಜದಲ್ಲಿಯೇ ಮಾದರಿಯಾಗಿದೆ ಎಂದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರುತಿ,ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ತಾರ ,ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು,. ದುರ್ಗಾಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು, ಶ್ರೀಮತಿ ವೇದಾವತಿ ಸ್ವಾಗತಿಸಿದರು, ಸೀತಾ ರವರು ಜ್ಞಾನವಿಕಾಸ ಕೇಂದ್ರದ ಮೂಲಕ ತನ್ನ ಬದುಕನ್ನು ಕಟ್ಟಿಕೊಂಡ ಬಗ್ಗೆ ಅನುಭವವನ್ನು ಹಂಚಿಕೊಂಡರು, ಶ್ರೀಮತಿ ನಳಿನಾಕ್ಷಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!