24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ, ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ ನಡೆಯಿತು.

ಕೀರ್ತಿ ಜ್ಞಾನವಿಕಾಸ ಕೇಂದ್ರದಲ್ಲಿ ಮೇಲ್ವಿಚಾರಕರಾದ ರಾಮ್ ಕುಮಾರ್ ಮಾಹಿತಿಯನ್ನು ನೀಡುತ್ತಾ ಕುಟುಂಬದಲ್ಲಿ ಅತೀ ಮುಖ್ಯವಾಗಿ ತಾಯಿಯು ಮನೆಯ ಎಲ್ಲಾ ಸದಸ್ಯರನ್ನು ಸಮಾನತೆಯಲ್ಲಿ ಪ್ರೀತಿಯಿಂದ ನೋಡಿಕೊಂಡಾಗ, ಮಕ್ಕಳು ಮತ್ತು ಮನೆಯವರು ಕೂಡ ಪರಸ್ಪರ ಹೊಂದಾಣಿಕೆಯೊಂದಿಗೆ ಪ್ರತಿಯೊಂದು ವಿಚಾರಗಳನ್ನು ಮುಕ್ತವಾಗಿ ಮಾತನಾಡಿಕೊಂಡು, ಸಮಾನವಾಗಿ ಸ್ವೀಕರಿಸಿ ಬದುಕನ್ನು ಕಟ್ಟಿಕೊಂಡಾಗ ಆ ಮನೆಯ ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ರಾಜ್ಯದ್ಯಂತ ಇಂದು ಜ್ಞಾನವಿಕಾಸ ಕೇಂದ್ರದ ಮೂಲಕವಾಗಿ ಮಹಿಳೆಯರ ಸಾಮಾಜಿಕವಾಗಿ ಆರ್ಥಿಕ ಸಬಲೀಕರಣದೊಂದಿಗೆ ಪ್ರಗತಿಯನ್ನು ಹೊಂದಿದ್ದು,ಸಮಾಜದಲ್ಲಿಯೇ ಮಾದರಿಯಾಗಿದೆ ಎಂದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರುತಿ,ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ತಾರ ,ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು,. ದುರ್ಗಾಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು, ಶ್ರೀಮತಿ ವೇದಾವತಿ ಸ್ವಾಗತಿಸಿದರು, ಸೀತಾ ರವರು ಜ್ಞಾನವಿಕಾಸ ಕೇಂದ್ರದ ಮೂಲಕ ತನ್ನ ಬದುಕನ್ನು ಕಟ್ಟಿಕೊಂಡ ಬಗ್ಗೆ ಅನುಭವವನ್ನು ಹಂಚಿಕೊಂಡರು, ಶ್ರೀಮತಿ ನಳಿನಾಕ್ಷಿ ಧನ್ಯವಾದವಿತ್ತರು.

Related posts

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!