27 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ, ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ ನಡೆಯಿತು.

ಕೀರ್ತಿ ಜ್ಞಾನವಿಕಾಸ ಕೇಂದ್ರದಲ್ಲಿ ಮೇಲ್ವಿಚಾರಕರಾದ ರಾಮ್ ಕುಮಾರ್ ಮಾಹಿತಿಯನ್ನು ನೀಡುತ್ತಾ ಕುಟುಂಬದಲ್ಲಿ ಅತೀ ಮುಖ್ಯವಾಗಿ ತಾಯಿಯು ಮನೆಯ ಎಲ್ಲಾ ಸದಸ್ಯರನ್ನು ಸಮಾನತೆಯಲ್ಲಿ ಪ್ರೀತಿಯಿಂದ ನೋಡಿಕೊಂಡಾಗ, ಮಕ್ಕಳು ಮತ್ತು ಮನೆಯವರು ಕೂಡ ಪರಸ್ಪರ ಹೊಂದಾಣಿಕೆಯೊಂದಿಗೆ ಪ್ರತಿಯೊಂದು ವಿಚಾರಗಳನ್ನು ಮುಕ್ತವಾಗಿ ಮಾತನಾಡಿಕೊಂಡು, ಸಮಾನವಾಗಿ ಸ್ವೀಕರಿಸಿ ಬದುಕನ್ನು ಕಟ್ಟಿಕೊಂಡಾಗ ಆ ಮನೆಯ ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ರಾಜ್ಯದ್ಯಂತ ಇಂದು ಜ್ಞಾನವಿಕಾಸ ಕೇಂದ್ರದ ಮೂಲಕವಾಗಿ ಮಹಿಳೆಯರ ಸಾಮಾಜಿಕವಾಗಿ ಆರ್ಥಿಕ ಸಬಲೀಕರಣದೊಂದಿಗೆ ಪ್ರಗತಿಯನ್ನು ಹೊಂದಿದ್ದು,ಸಮಾಜದಲ್ಲಿಯೇ ಮಾದರಿಯಾಗಿದೆ ಎಂದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರುತಿ,ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ತಾರ ,ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು,. ದುರ್ಗಾಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು, ಶ್ರೀಮತಿ ವೇದಾವತಿ ಸ್ವಾಗತಿಸಿದರು, ಸೀತಾ ರವರು ಜ್ಞಾನವಿಕಾಸ ಕೇಂದ್ರದ ಮೂಲಕ ತನ್ನ ಬದುಕನ್ನು ಕಟ್ಟಿಕೊಂಡ ಬಗ್ಗೆ ಅನುಭವವನ್ನು ಹಂಚಿಕೊಂಡರು, ಶ್ರೀಮತಿ ನಳಿನಾಕ್ಷಿ ಧನ್ಯವಾದವಿತ್ತರು.

Related posts

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya
error: Content is protected !!