24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

ಬೆಳ್ತಂಗಡಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿ ಶುಭಕೋರಿದರು.

ಪ್ರಗತಿಪರ ಕೃಷಿಕ ಪೊನ್ನೆಮಾರಡ್ಡ ಮನೆಯ ರಾಜು ಶೆಟ್ಟಿ ಪಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಶಾಸಕರನ್ನು ಮತ್ತು ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸಿ, ಸೊಸೈಟಿಯ ಕಾರ್ಯವೈಖರಿ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಓ ಶಶಿಕಾಂತ್ ಜೈನ್, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್, ಸೊಸೈಟಿ ನಿರ್ದೇಶಕರಾದ ಸದಾನಂದ ಗೌಡ ಸುಲ್ಕೇರಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ವಿಠಲ ಪೂಜಾರಿ ಸಾವ್ಯ, ಉಮೇಶ್ ಎಂ.ಕೆ ನಾರಾವಿ, ರಾಜೇಂದ್ರ ಕುಮಾರ್ ನಾರಾವಿ, ಶೇಖರ್ ಕುತ್ಲೂರು, ಯಶೋದ ಕುತ್ಲೂರು, ಸುಜಲತಾ ನಾರಾವಿ, ಪದ್ಮಶ್ರೀ ಕೊಕ್ರಾಡಿ, ಸುಪ್ರಿಯಾ ನಾರಾವಿ, ಕೊಕ್ರಾಡಿ ಶಾಖಾ ಮುಖ್ಯಸ್ಥ ಶೇಖರ್, ಪ್ರಮಖರಾದ ಉದಯ ಹೆಗ್ಡೆ, ಅಭಿಜಿತ್ ಜೈನ್, ಹರೀಶ್ ಹೆಗ್ಡೆ ಸಾವ್ಯ, ಲಕ್ಷ್ಮಣ್ ಪೂಜಾರಿ ಕೊಕ್ರಾಡಿ, ಮೋಹನ್ ಹೆಗ್ಡೆ ಸಾವ್ಯ, ಸಂತೋಷ್ ಕುತ್ಲೂರು, ವಿಷ್ಣು ಕೊಕ್ರಾಡಿ, ಆಶಾಲತಾ ನಾರಾವಿ ಹಾಗೂ ಊರವರು, ಸಹಕಾರಿ ಸಂಘದ ಸದಸ್ಯರು, ಸಿಎ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಯಶೋಧರ್ ಬಂಗೇರ ನಿರೂಪಿಸಿದರು.

Related posts

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!