30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

ಕನ್ಯಾಡಿ 2 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಕಾರ್ಯಕ್ರಮ ಮತ್ತು”ಪೋಷಕರ – ಶಿಕ್ಷಕರ ಮಹಾ ಸಭೆ” ಇತ್ತೀಚೆಗೆ ನಡೆಯಿತು.

ಅತಿಥಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಧರ್ಮಸ್ಥಳ, ಪವಿತ್ರ ಸುಕುಮಾರ ಶೆಟ್ಟಿ , ಎಸ್ ಡಿ ಎಮ್ ಸಿ ಅಧ್ಯಕ್ಷ ಕೆ.ನಂದ , ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , . ನೀಲಕಂಠ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸುದರ್ಶನ್ ಕನ್ಯಾಡಿ, ಕಿರಣ್ , ಎಸ್‌ಡಿ ಎಂ ಸಿ ಯ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ . ಎನ್ ಮತ್ತು ಶಿಕ್ಷಕ ವೃಂದ , ಪೋಷಕ ವೃಂದದವರು ಉಪಸ್ಥಿತರಿದ್ದರು.

ನಂತರ ಪೋಷಕ ಶಿಕ್ಷಕರ ಮಹಾ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಶುಭ ಆರಂಭಗೊಂಡಿತು. ಪೋಷಕರ ಸಮ್ಮುಖದಲ್ಲಿ ಅತಿಥಿಗಳ ಕೈಯಿಂದ ಉಚಿತ ಪುಸ್ತಕವನ್ನು ಸಾಂಕೇತಿಕವಾಗಿ ವಿತರಿಸಲಾಯಿತು . ಪೋಷಕರಿಗೆ ಶೈಕ್ಷಣಿಕ ಮಾಹಿತಿಗಳನ್ನು ಮುಖ್ಯೋಪಾಧ್ಯಾಯಿನಿ ಪುಷ್ಪಾ ಎನ್ ನೀಡಿದರು. ಶ್ರೀಮತಿ ಗಾಯತ್ರಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಧರ್ಮಸ್ಥಳ ಇವರು ಶೈಕ್ಷಣಿಕವಾಗಿ ಮಕ್ಕಳಿಗೆ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಪೋಷಕರ ಮತ್ತು ಸಮಿತಿಯವರ ಪಾತ್ರದ ಬಗ್ಗೆ ತಿಳಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಹಿರಿಯ ವಿದ್ಯಾರ್ಥಿ ಹಾಗೂ ಗೌರವ ಸಲಹೆಗಾರರಾಗಿ ರಾಜೇಂದ್ರ ಆಜ್ರಿಯವರು ಶುಭವನ್ನು ಹಾರೈಸಿದರು . ಸಹಶಿಕ್ಷಕಿ ದೀಪಿಕಾ ಸ್ವಾಗತಿಸಿ , ಶ್ರೀಮತಿ ಜೆಸಿಂತಾ ನೊರೊನ್ಹಾ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!