25 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

ಕನ್ಯಾಡಿ 2 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಕಾರ್ಯಕ್ರಮ ಮತ್ತು”ಪೋಷಕರ – ಶಿಕ್ಷಕರ ಮಹಾ ಸಭೆ” ಇತ್ತೀಚೆಗೆ ನಡೆಯಿತು.

ಅತಿಥಿಗಳಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಧರ್ಮಸ್ಥಳ, ಪವಿತ್ರ ಸುಕುಮಾರ ಶೆಟ್ಟಿ , ಎಸ್ ಡಿ ಎಮ್ ಸಿ ಅಧ್ಯಕ್ಷ ಕೆ.ನಂದ , ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , . ನೀಲಕಂಠ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸುದರ್ಶನ್ ಕನ್ಯಾಡಿ, ಕಿರಣ್ , ಎಸ್‌ಡಿ ಎಂ ಸಿ ಯ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ . ಎನ್ ಮತ್ತು ಶಿಕ್ಷಕ ವೃಂದ , ಪೋಷಕ ವೃಂದದವರು ಉಪಸ್ಥಿತರಿದ್ದರು.

ನಂತರ ಪೋಷಕ ಶಿಕ್ಷಕರ ಮಹಾ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಶುಭ ಆರಂಭಗೊಂಡಿತು. ಪೋಷಕರ ಸಮ್ಮುಖದಲ್ಲಿ ಅತಿಥಿಗಳ ಕೈಯಿಂದ ಉಚಿತ ಪುಸ್ತಕವನ್ನು ಸಾಂಕೇತಿಕವಾಗಿ ವಿತರಿಸಲಾಯಿತು . ಪೋಷಕರಿಗೆ ಶೈಕ್ಷಣಿಕ ಮಾಹಿತಿಗಳನ್ನು ಮುಖ್ಯೋಪಾಧ್ಯಾಯಿನಿ ಪುಷ್ಪಾ ಎನ್ ನೀಡಿದರು. ಶ್ರೀಮತಿ ಗಾಯತ್ರಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಧರ್ಮಸ್ಥಳ ಇವರು ಶೈಕ್ಷಣಿಕವಾಗಿ ಮಕ್ಕಳಿಗೆ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಪೋಷಕರ ಮತ್ತು ಸಮಿತಿಯವರ ಪಾತ್ರದ ಬಗ್ಗೆ ತಿಳಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಹಿರಿಯ ವಿದ್ಯಾರ್ಥಿ ಹಾಗೂ ಗೌರವ ಸಲಹೆಗಾರರಾಗಿ ರಾಜೇಂದ್ರ ಆಜ್ರಿಯವರು ಶುಭವನ್ನು ಹಾರೈಸಿದರು . ಸಹಶಿಕ್ಷಕಿ ದೀಪಿಕಾ ಸ್ವಾಗತಿಸಿ , ಶ್ರೀಮತಿ ಜೆಸಿಂತಾ ನೊರೊನ್ಹಾ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!