27 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

ಮಡಂತ್ಯಾರು: ಜೆಸಿಐ ಮಡಂತ್ಯಾರಿನ ವತಿಯಿಂದ ಬಿಸಿಎಂ ಹಾಸ್ಟೆಲ್ ಸಬರಬೈಲಿನಲ್ಲಿ ಪ್ರಯಾಸ್ ಡೇ ಹಾಗೂ ವಿಶ್ವ ಪರಿಸರ ದಿನ ಆಚರಣೆ ನಡೆಯಿತು.

ಮಹಿಳಾ ಜೆಸಿ ಸಂಯೋಜಕಿ ಜೇಸಿ ಭವ್ಯ ಪೈ ನೇತೃತ್ವದಲ್ಲಿ “ಪ್ರಯಾಸ್ ಡೇ” ಆಚರಣೆಯ ಪ್ರಯುಕ್ತ ಬಿಸಿಎಂ ಹಾಸ್ಟೆಲಿನ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಯಿತು.

ಅಂತೆಯೇ “ವಿಶ್ವ ಪರಿಸರ ದಿನ” ದ ಅಂಗವಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷ ಜೆ.ಎಫ್.ಡಿ. ಸಾಯಿಸುಮಾ ನಾವಡ ಅವರ ನೇತೃತ್ವದಲ್ಲಿ ಹಣ್ಣಿನ ಗಿಡಗಳನ್ನು ಹಾಸ್ಟೆಲಿನಲ್ಲಿ ನೆಡಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಯತೀಶ್ ರೈ, ಪರಿಸರ ದಿನದ ಸಂಯೋಜಕರಾದ ಜೇಸಿ ಭಾರತಿ ಸುರೇಶ್ ಹಾಗೂ ಹಾಸ್ಟೆಲ್ ಮೇಲ್ವಿಚಾರಕಿ ಶ್ರೀಮತಿ ಅಂಬಿಕಾ ಉಪಸ್ಥಿತರಿದ್ದರು.

Related posts

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
error: Content is protected !!