July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 9.ರಂದು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾದ ಸಭೆ ನಡೆಯಿತು.

ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್ ಭಾಗವಹಿಸಿ, ತೀವ್ರ ಮತಪಟ್ಟಿ ಪರಿಷ್ಕರಣೆಯ ಮುಂದಿನ ಕಾರ್ಯ ಯೋಜನೆ ಬಗ್ಗೆ, ಪ್ರವಾಸ ಪ್ರಮುಖ, ಮನ್ ಕಿ ಬಾತ್ ಪ್ರಮುಖ್ ರನ್ನು ಆಯ್ಕೆ ಮಾಡುವ ಬಗ್ಗೆ, ಮಂಗಳೂರಿನಲ್ಲಿ ನಡೆಯುವ ಅಭಿನಂದನಾ ಸಭೆಯ ಬಗ್ಗೆ, ಮೋದಿಜಿಯ 12 ವರ್ಷದ ಆಡಳಿತದ ಸಂಭ್ರಮಾಚರಣೆಯನ್ನು ಆಚರಿಸುವ ಬಗ್ಗೆ ,ಹೀಗೆ ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ್ ಮನ್ ಕಿ ಬಾತ್ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲಖೀತ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಮಂಡಲ ಪ್ರಭರಿಗಳು ಕಮಲಾಕ್ಷಿ, ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ್ ,ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ , ಜಿಲ್ಲಾ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ಸಿ ಕೆ, ಮಂಡಲ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ನಾಯಕ್ ಮತ್ತು ಮಹಿಳಾ ಮೋರ್ಚದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya
error: Content is protected !!