25 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ 23 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರ ಮೊದಲ ಹಂತದ ಕಾಮಗಾರಿಗೆ 9 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಹಲವು ವರ್ಷಗಳಿಂದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಿಕರು ಸಲ್ಲಿಸುತ್ತಿದ್ದ ಬೇಡಿಕೆಗೆ ಇದೀಗ ರಾಜ್ಯ ಸರಕಾರದಿಂದ ಸ್ಪಂದನೆ ದೊರೆತಿದ್ದು, ಜೂ.14 ರಂದು ಬೆಳ್ತಂಗಡಿ ನೂತನ ನ್ಯಾಯಾಲಯದ ಶಂಕುಸ್ಥಾಪಣೆಯಾಗಲಿದ್ದು ಬಹುಕಾಲದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಬೆಳ್ತಂಗಡಿ ವಕೀಲರ ಸಂಘ ಕಳೆದ 10 – 12 ವರ್ಷಗಳಿಂದ ನಿರಂತರವಾಗಿ ಈ ಹಿಂದಿನ ಸರ್ಕಾರಗಳ ಗಮನ ಸೆಳೆಯುತ್ತಾ ಬಂದಿದೆ.

ಈ ಕುರಿತು ಹಿಂದಿನ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಾನೂನು ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೋಳಿ ಬಳಿ ವಕೀಲರ ನಿಯೋಗವನ್ನು ಕರಕೊಂಡು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ಇವರು ಮನವಿಗಳನ್ನು ನೀಡಿದ್ದರ ಫಲವಾಗಿ ರಾಜ್ಯ ಸರಕಾರದಿಂದ ಅನುದಾನವನ್ನು ಒದಗಿಸಿರುವುದರಲ್ಲಿ ಸಫಲರಾದ ರಕ್ಷಿತ್ ಶಿವರಾಮ್ ಅವರಿಗೆ ಜಿಲ್ಲಾ ಕೆ.ಡಿ.ಪಿ ಸದಸ್ಯನಾಗಿ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸದಸ್ಯನಾಗಿ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

ಅಲ್ಲದೆ ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಹಾಗೂ ಐವನ್ ಡಿಸೋಜ ಅವರು ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದದ್ದಾಕ್ಕಾಗಿ ಅಬಿನಂದಿಸುತ್ತೇನೆ ಎಂದು ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿದ್ದಾರೆ

Related posts

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya
error: Content is protected !!