24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ, ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ ನಡೆಯಿತು.

ಕೀರ್ತಿ ಜ್ಞಾನವಿಕಾಸ ಕೇಂದ್ರದಲ್ಲಿ ಮೇಲ್ವಿಚಾರಕರಾದ ರಾಮ್ ಕುಮಾರ್ ಮಾಹಿತಿಯನ್ನು ನೀಡುತ್ತಾ ಕುಟುಂಬದಲ್ಲಿ ಅತೀ ಮುಖ್ಯವಾಗಿ ತಾಯಿಯು ಮನೆಯ ಎಲ್ಲಾ ಸದಸ್ಯರನ್ನು ಸಮಾನತೆಯಲ್ಲಿ ಪ್ರೀತಿಯಿಂದ ನೋಡಿಕೊಂಡಾಗ, ಮಕ್ಕಳು ಮತ್ತು ಮನೆಯವರು ಕೂಡ ಪರಸ್ಪರ ಹೊಂದಾಣಿಕೆಯೊಂದಿಗೆ ಪ್ರತಿಯೊಂದು ವಿಚಾರಗಳನ್ನು ಮುಕ್ತವಾಗಿ ಮಾತನಾಡಿಕೊಂಡು, ಸಮಾನವಾಗಿ ಸ್ವೀಕರಿಸಿ ಬದುಕನ್ನು ಕಟ್ಟಿಕೊಂಡಾಗ ಆ ಮನೆಯ ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ರಾಜ್ಯದ್ಯಂತ ಇಂದು ಜ್ಞಾನವಿಕಾಸ ಕೇಂದ್ರದ ಮೂಲಕವಾಗಿ ಮಹಿಳೆಯರ ಸಾಮಾಜಿಕವಾಗಿ ಆರ್ಥಿಕ ಸಬಲೀಕರಣದೊಂದಿಗೆ ಪ್ರಗತಿಯನ್ನು ಹೊಂದಿದ್ದು,ಸಮಾಜದಲ್ಲಿಯೇ ಮಾದರಿಯಾಗಿದೆ ಎಂದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರುತಿ,ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ತಾರ ,ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು,. ದುರ್ಗಾಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು, ಶ್ರೀಮತಿ ವೇದಾವತಿ ಸ್ವಾಗತಿಸಿದರು, ಸೀತಾ ರವರು ಜ್ಞಾನವಿಕಾಸ ಕೇಂದ್ರದ ಮೂಲಕ ತನ್ನ ಬದುಕನ್ನು ಕಟ್ಟಿಕೊಂಡ ಬಗ್ಗೆ ಅನುಭವವನ್ನು ಹಂಚಿಕೊಂಡರು, ಶ್ರೀಮತಿ ನಳಿನಾಕ್ಷಿ ಧನ್ಯವಾದವಿತ್ತರು.

Related posts

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya
error: Content is protected !!