24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯ ವಾರ್ಷಿಕ ಮಹಾಸಭೆಯಲ್ಲಿ 2026-2027ನೇ ಸಾಲಿಗೆ ಸರ್ವಾನುಮತದಿಂದ ಆಯ್ಕೆಯಾದ ನೂತನ ಟ್ರಸ್ಟಿಗಳಾದ ಜೈಸನ್ ಮ್ಯಾಲಿಲ್, ಕುರಿಯನ್ ಕಿಯಕ್ಕೆಲ್, ರಾಜೇಶ್ ತೆಕ್ಕನಾಟ್ಟ್ ಹಾಗೂ ಸೇಬಾಸ್ಟಿಯನ್ ವಲಿಯಪರಂಭಿಲ್ ಅವರು ಪದಗ್ರಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು ನೂತನ ಟ್ರಸ್ಟಿಗಳಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಟ್ರಸ್ಟಿಗಳು ನಿಷ್ಕಾಮ ಸೇವಾ ಮನೋಭಾವದಿಂದ ಸಮಾಜಮುಖಿ ಹಾಗೂ ಜನಾನುರಾಗಿ ಕಾರ್ಯಗಳನ್ನು ಕೈಗೊಂಡು, ಪುಣ್ಯ ಕ್ಷೇತ್ರದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ತಮ್ಮ ಅಮೂಲ್ಯ ಕೊಡುಗೆಯನ್ನು ನೀಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹಾಗೂ ಧರ್ಮ ಕೇಂದ್ರದ ಸದಸ್ಯರು ಉಪಸ್ಥಿತರಿದ್ದು, ನೂತನ ಟ್ರಸ್ಟಿಗಳಿಗೆ ಶುಭಾಶಯಗಳನ್ನು ಕೋರಿದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya
error: Content is protected !!